ಶ್ರೀನಗರ, ಗುಲ್ಮಾರ್ಗ್, ಪಹಲ್ಗಾಮ್, ಗುರೇಜ್ ಮತ್ತು ಕುಪ್ವಾರ ಜಿಲ್ಲೆಯ ಬಯಲು ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿದೆ. ಇದರಿಂದ ರಾಜ್ಯದಲ್ಲಿ ರಸ್ತೆ ಸೇರಿದಂತೆ ವಾಯು ಸಂಚಾರದ ಮೇಲೆ ಪರಿಣಾಮ ಬೀರಿದೆ. ಕಾಶ್ಮೀರವು ಇತರೆ ಪ್ರದೇಶಗಳೊಂದಿಗೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.