<p><strong>ಮುಂಬೈ: </strong>‘ರೈತರ ವಿಷಯಗಳನ್ನು ಮುಂದಿಟ್ಟುಕೊಂಡು ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿ, ನಂತರ ಅದರಿಂದ ಹಿಂದೆ ಸರಿಯುವುದು ಮಾಮೂಲಿ. ಈ ಬಾರಿಯೂ ಅದು ನಿರೀಕ್ಷೆಯಂತೆಯೇ ಆಗಿದೆ’ ಎಂದು ಶಿವಸೇನಾ ಶನಿವಾರ ಲೇವಡಿ ಮಾಡಿದೆ.</p>.<p>‘ಹಜಾರೆ ಅವರ ಈ ನಡೆ ತಮಾಷೆ ಎನಿಸುತ್ತವೆ. ಆದರೆ, ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಹಜಾರೆ ಅವರ ನಿಲುವು ಏನು ಎಂಬುದು ಇನ್ನೂ ಅಸ್ಪಷ್ಟ’ ಎಂದು ಪಕ್ಷದ ಮುಖವಾಣಿ ‘ಸಾಮ್ನಾ‘ದ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p>ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಶುಕ್ರವಾರ ಘೋಷಿಸಿದ್ದರು.</p>.<p>ಕೇಂದ್ರದ ಕೃಷಿ ಖಾತೆಯ ರಾಜ್ಯ ಸಚಿವ ಕೈಲಾಶ್ ಚೌಧರಿ, ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್ ಅವರೊಂದಿಗೆ ಚರ್ಚೆ ನಡೆಸಿದ ನಂತರ ಅವರು ತಮ್ಮ ನಿರ್ಧಾರವನ್ನು ಬದಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>‘ರೈತರ ವಿಷಯಗಳನ್ನು ಮುಂದಿಟ್ಟುಕೊಂಡು ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿ, ನಂತರ ಅದರಿಂದ ಹಿಂದೆ ಸರಿಯುವುದು ಮಾಮೂಲಿ. ಈ ಬಾರಿಯೂ ಅದು ನಿರೀಕ್ಷೆಯಂತೆಯೇ ಆಗಿದೆ’ ಎಂದು ಶಿವಸೇನಾ ಶನಿವಾರ ಲೇವಡಿ ಮಾಡಿದೆ.</p>.<p>‘ಹಜಾರೆ ಅವರ ಈ ನಡೆ ತಮಾಷೆ ಎನಿಸುತ್ತವೆ. ಆದರೆ, ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಹಜಾರೆ ಅವರ ನಿಲುವು ಏನು ಎಂಬುದು ಇನ್ನೂ ಅಸ್ಪಷ್ಟ’ ಎಂದು ಪಕ್ಷದ ಮುಖವಾಣಿ ‘ಸಾಮ್ನಾ‘ದ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p>ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಶುಕ್ರವಾರ ಘೋಷಿಸಿದ್ದರು.</p>.<p>ಕೇಂದ್ರದ ಕೃಷಿ ಖಾತೆಯ ರಾಜ್ಯ ಸಚಿವ ಕೈಲಾಶ್ ಚೌಧರಿ, ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್ ಅವರೊಂದಿಗೆ ಚರ್ಚೆ ನಡೆಸಿದ ನಂತರ ಅವರು ತಮ್ಮ ನಿರ್ಧಾರವನ್ನು ಬದಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>