ಹಣಕಾಸು ಮಾರುಕಟ್ಟೆಗಳಲ್ಲಿ ವಿಶ್ವಾಸವನ್ನು ಬೆಳೆಸಲು, ಹಣ ಅಕ್ರಮ ವರ್ಗಾವಣೆ, ಭಯೋತ್ಪಾದನೆಗೆ ಹಣ ಪ್ರಸರಣವನ್ನು ತಡೆಯಲು ಜಾರಿಗೆ ತಂದಿರುವ ಕ್ರಮಗಳ ಪರಿಣಾಮಕಾರಿ ಅನುಷ್ಠಾನ ಅತ್ಯಗತ್ಯ. ಸುಸ್ಥಿರ ಚೇತರಿಕೆ ಮತ್ತು ಅಂತರರಾಷ್ಟ್ರೀಯ ಹಣಕಾಸು ವ್ಯವಸ್ಥೆಯ ಸಮಗ್ರತೆಯನ್ನು ರಕ್ಷಿಸುವುದು ಮುಖ್ಯವಾಗಿದೆ ಎಂದು ನಾಯಕರು ಹೇಳಿದ್ದಾರೆ.