ನವದೆಹಲಿ: ರಾಜ್ಯಸಭೆ ವಿರೋಧ ಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ 'ಜಿ-23'ಯ ಕೆಲವು ನಾಯಕರು ಔತಣಕೂಟದಲ್ಲಿ ಪಾಲ್ಗೊಂಡರು. ಈ ವೇಳೆ, 'ಜಿ-23' ನ ಭವಿಷ್ಯದ ಕಾರ್ಯತಂತ್ರ ರೂಪಿಸಲು ಮತ್ತು ಈಗಷ್ಟೇ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಚರ್ಚಿಸಿದರು.
ಈ ಗುಂಪು ಈ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರ ನಿವಾಸದಲ್ಲಿ ಔತಣಕೂಟವನ್ನು ಆಯೋಜಿಸಿತ್ತು, ಆದರೆ ಕೊನೆಯ ಕ್ಷಣದಲ್ಲಿ ಅದನ್ನು ಬದಲಾಯಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಈಗ ಹೊಸದಾಗಿ, ಪಟಿಯಾಲದ ಸಂಸದೆ ಪ್ರಣೀತ್ ಕೌರ್, ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ, ಮಾಜಿ ಕೇಂದ್ರ ಸಚಿವ ಮಣಿ ಶಂಕರ್ ಅಯ್ಯರ್ ಮತ್ತು ಹರಿಯಾಣದ ಮಾಜಿ ಸ್ಪೀಕರ್ ಕುಲದೀಪ್ ಶರ್ಮಾ ಕೂಡ ಜಿ-23' ಅನ್ನು ಸೇರಿಕೊಂಡಿದ್ದಾರೆ.
ಔತಣಕೂಟಕ್ಕೆ ಹಾಜರಾಗುವಂತೆ ಇತರೆ ಕಾಂಗ್ರೆಸ್ಸಿಗರಿಗೂ ಮುಕ್ತ ಆಹ್ವಾನ ನೀಡಲಾಗಿತ್ತು.