<p class="bodytext"><strong>ಚೆನ್ನೈ</strong>: ಡಿಎಂಕೆ ಪಾಲಿಗೆ ಕ್ರಾಂತಿಕಾರಕ ಯೋಜನೆ ಎಂದೇ ಬಿಂಬಿತವಾಗಿರುವ ‘ಮಗಳಿರ್ ಉರಿಮೈ ತೊಗೈ’ (ನೆರವು ಮಹಿಳೆಯರ ಹಕ್ಕು) ಯೋಜನೆಯನ್ನು ಡಿಎಂಕೆ ಸೋಮವಾರ ಘೋಷಿಸಿದ್ದು ಅರ್ಹ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹1 ಸಾವಿರ ನೆರವು ನೀಡಲಾಗುತ್ತದೆ.</p>.<p>ರಾಜ್ಯ ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಅವರು 2023–24ನೇ ಸಾಲಿನ ಬಜೆಟ್ನಲ್ಲಿ ಈ ಯೋಜನೆಯನ್ನು ಘೋಷಿಸಿದರು. ಡಿಎಂಕೆ ಸ್ಥಾಪಕ, ದಿವಂಗತ ಸಿ.ಎನ್. ಅಣ್ಣಾದೊರೈ ಜನ್ಮ ದಿನವಾದ ಸೆ.15ರಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಈ ಯೋಜನೆಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.</p>.<p>‘ಬಜೆಟ್ನಲ್ಲಿ ಈ ಯೋಜನೆಗಾಗಿ ₹ 7 ಸಾವಿರ ಕೋಟಿ ಮೀಸಲಿಡಲಾಗಿದೆ. ರಾಜ್ಯದ ಮಹಿಳೆಯರ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಉನ್ನತೀಕರಿಸಲು ಇದು ಸಹಕಾರಿಯಾಗಲಿದೆ’ ಎಂದು ಸಚಿವ ತ್ಯಾಗರಾಜನ್ ಅಭಿಪ್ರಾಯಪಟ್ಟರು.</p>.<p>2021ರ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಡಿಎಂಕೆ ಈ ಯೋಜನೆಯನ್ನು ಜಾರಿಗೊಳಿಸುವುದಾಗಿ ಹೇಳಿತ್ತು. ಡಿಎಂಕೆಯ ಈ ಭರವಸೆಯು ಭಾರಿ ಜನಪ್ರಿಯತೆ ಪಡೆದಿತ್ತು. 2024ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಇರುವಾಗ ಡಿಎಂಕೆ ಈ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಚೆನ್ನೈ</strong>: ಡಿಎಂಕೆ ಪಾಲಿಗೆ ಕ್ರಾಂತಿಕಾರಕ ಯೋಜನೆ ಎಂದೇ ಬಿಂಬಿತವಾಗಿರುವ ‘ಮಗಳಿರ್ ಉರಿಮೈ ತೊಗೈ’ (ನೆರವು ಮಹಿಳೆಯರ ಹಕ್ಕು) ಯೋಜನೆಯನ್ನು ಡಿಎಂಕೆ ಸೋಮವಾರ ಘೋಷಿಸಿದ್ದು ಅರ್ಹ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹1 ಸಾವಿರ ನೆರವು ನೀಡಲಾಗುತ್ತದೆ.</p>.<p>ರಾಜ್ಯ ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಅವರು 2023–24ನೇ ಸಾಲಿನ ಬಜೆಟ್ನಲ್ಲಿ ಈ ಯೋಜನೆಯನ್ನು ಘೋಷಿಸಿದರು. ಡಿಎಂಕೆ ಸ್ಥಾಪಕ, ದಿವಂಗತ ಸಿ.ಎನ್. ಅಣ್ಣಾದೊರೈ ಜನ್ಮ ದಿನವಾದ ಸೆ.15ರಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಈ ಯೋಜನೆಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.</p>.<p>‘ಬಜೆಟ್ನಲ್ಲಿ ಈ ಯೋಜನೆಗಾಗಿ ₹ 7 ಸಾವಿರ ಕೋಟಿ ಮೀಸಲಿಡಲಾಗಿದೆ. ರಾಜ್ಯದ ಮಹಿಳೆಯರ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಉನ್ನತೀಕರಿಸಲು ಇದು ಸಹಕಾರಿಯಾಗಲಿದೆ’ ಎಂದು ಸಚಿವ ತ್ಯಾಗರಾಜನ್ ಅಭಿಪ್ರಾಯಪಟ್ಟರು.</p>.<p>2021ರ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಡಿಎಂಕೆ ಈ ಯೋಜನೆಯನ್ನು ಜಾರಿಗೊಳಿಸುವುದಾಗಿ ಹೇಳಿತ್ತು. ಡಿಎಂಕೆಯ ಈ ಭರವಸೆಯು ಭಾರಿ ಜನಪ್ರಿಯತೆ ಪಡೆದಿತ್ತು. 2024ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಇರುವಾಗ ಡಿಎಂಕೆ ಈ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>