<p><strong>ನವದೆಹಲಿ: </strong>ಉತ್ತರ ಪ್ರದೇಶದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಅಪರಾಧಿಗಳನ್ನು ರಕ್ಷಿಸುವಲ್ಲಿ ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಆರೋಪಿಸಿದ್ದಾರೆ.</p>.<p>ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಮತ್ತು ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ವರದಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಮತ್ತು ಪ್ರಿಯಾಂಕಾ, ‘ಇವರು ಶುರು ಮಾಡಿದ್ದು; ಬೇಟಿ ಬಚಾವೊ(ಹೆಣ್ಣು ಮಕ್ಕಳನ್ನು ರಕ್ಷಿಸಿ) ಎಂದು. ಈಗ ನಡೆಯುತ್ತಿರುವುದು; ‘ಅಪರಾಧಿ ಬಚಾವೊ (ಅಪರಾಧಿ ರಕ್ಷಿಸಿ)‘ ಎಂದು ಉಲ್ಲೇಖಿಸಿದ್ದಾರೆ. ಈ ಟ್ವೀಟ್ ಜತೆಗೆ ಬಿಜೆಪಿ ಶಾಸಕ ಮತ್ತು ಅವರ ಪುತ್ರನ ಪ್ರಕರಣದ ಮಾಧ್ಯಮಗಳ ವರದಿಯನ್ನು ಟ್ಯಾಗ್ ಮಾಡಿದ್ದಾರೆ.</p>.<p>‘ಇದು ಯಾವ 'ಮಿಷನ್' ಅಡಿಯಲ್ಲಿ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಹೇಳುತ್ತೀರಾ? 'ಬೇಟಿ ಬಚಾವೊ' (ಹೆಣ್ಣುಮಕ್ಕಳನ್ನು ಉಳಿಸಿ) ಅಥವಾ 'ಅಪರಾಧಿ ಬಚಾವೊ' (ಅಪರಾಧಿಗಳನ್ನು ಉಳಿಸಿ)?‘ ಎಂದುಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಉತ್ತರ ಪ್ರದೇಶದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಅಪರಾಧಿಗಳನ್ನು ರಕ್ಷಿಸುವಲ್ಲಿ ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಆರೋಪಿಸಿದ್ದಾರೆ.</p>.<p>ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಮತ್ತು ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ವರದಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಮತ್ತು ಪ್ರಿಯಾಂಕಾ, ‘ಇವರು ಶುರು ಮಾಡಿದ್ದು; ಬೇಟಿ ಬಚಾವೊ(ಹೆಣ್ಣು ಮಕ್ಕಳನ್ನು ರಕ್ಷಿಸಿ) ಎಂದು. ಈಗ ನಡೆಯುತ್ತಿರುವುದು; ‘ಅಪರಾಧಿ ಬಚಾವೊ (ಅಪರಾಧಿ ರಕ್ಷಿಸಿ)‘ ಎಂದು ಉಲ್ಲೇಖಿಸಿದ್ದಾರೆ. ಈ ಟ್ವೀಟ್ ಜತೆಗೆ ಬಿಜೆಪಿ ಶಾಸಕ ಮತ್ತು ಅವರ ಪುತ್ರನ ಪ್ರಕರಣದ ಮಾಧ್ಯಮಗಳ ವರದಿಯನ್ನು ಟ್ಯಾಗ್ ಮಾಡಿದ್ದಾರೆ.</p>.<p>‘ಇದು ಯಾವ 'ಮಿಷನ್' ಅಡಿಯಲ್ಲಿ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಹೇಳುತ್ತೀರಾ? 'ಬೇಟಿ ಬಚಾವೊ' (ಹೆಣ್ಣುಮಕ್ಕಳನ್ನು ಉಳಿಸಿ) ಅಥವಾ 'ಅಪರಾಧಿ ಬಚಾವೊ' (ಅಪರಾಧಿಗಳನ್ನು ಉಳಿಸಿ)?‘ ಎಂದುಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>