ಗ್ಯಾಂಗ್ಸ್ಟರ್ ಸಂದೀಪ್ ಸೇಥಿ ಎಂಬಾತನೇ ಹತ್ಯೆಗೀಡಾಗಿದ್ದಾನೆ. ಆತ ಸೆಪ್ಟೆಂಬರ್ 12ರಿಂದ ಜಾಮೀನಿನ ಮೇರೆಗೆ ಜೈಲಿನಿಂದ ಹೊರ ಬಂದಿದ್ದು, ವಿಚಾರಣೆಗೆಂದು ನಾಗೌರ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದನು.
ಆತ ನ್ಯಾಯಲಯದಿಂದ ಹೊರಬರುತ್ತಿದ್ದಂತೆ ಬೈಕ್ನಲ್ಲಿ ಬಂದ ನಾಲ್ಕೈದು ಅಪರಿಚಿತ ದುಷ್ಕರ್ಮಿಗಳು ಗ್ಯಾಂಗ್ಸ್ಟರ್ ಮೇಲೆ ಗುಂಡಿನ ಸುರಿಮಳೆಗೈದರು. ಇದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಮೀನಾ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸೇಥಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 25 ಪ್ರಕರಣಗಳು ದಾಖಲಾಗಿದ್ದವು.
ಪೊಲೀಸರು ತನಿಖೆ ಆರಂಭಿಸಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯ ಪರಿಶೀಲಿಸಲಾಗುತ್ತಿದೆ.