ಘಟನೆ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, ‘ಉತ್ತರ ಪ್ರದೇಶದಲ್ಲಿ ಅಪರಾಧ ಚಟುವಟಿಕೆಗಳು ಉತ್ತುಂಗಕ್ಕೇರಿವೆ. ಪೊಲೀಸರ ಭದ್ರತೆಯಲ್ಲಿ ಇರುವವವರೇ ಗುಂಡೇಟಿಗೆ ಬಲಿಯಾದರೆ ಜನಸಾಮಾನ್ಯರ ಪಾಡೇನು. ಈ ಘಟನೆಯಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೆಲವರು ಉದ್ದೇಶಪೂರ್ವಕವಾಗಿಯೇ ಸಮಾಜದ ನೆಮ್ಮದಿ ಹದಗೆಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.