<p>ಔರಂಗಾಬಾದ್: ಆಂಬುಲೆನ್ಸ್ ಲಭ್ಯವಿಲ್ಲದ ಕಾರಣ ಕೋವಿಡ್-19 ರೋಗಿಯ ಮೃತದೇಹವನ್ನು ಕಸದ ವಾಹನದಲ್ಲೇ ಸ್ಮಶಾನಕ್ಕೆ ಸಾಗಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿವೆ.</p>.<p>ಮಹಾರಾಷ್ಟ್ರದ ಒಸ್ಮನಾಬಾದ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಹೆಚ್ಚುವರಿ ಹಣ ನೀಡುವುದಾಗಿ ಹೇಳಿದರೂ ಖಾಸಗಿ ವಾಹನಗಳು ಮೃತದೇಹವನ್ನು ಸಾಗಿಸಲು ಹಿಂದೇಟು ಹಾಕಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸೋಮವಾರದಂದು ಕಿನ್ಹಿ ಗ್ರಾಮದ ನಿವಾಸಿಯೊಬ್ಬರು ಏಳು ಕಿ.ಮೀ. ದೂರದಲ್ಲಿರುವ ನೆರೆಯ ಟೆರ್ ಗ್ರಾಮದ ಖಾಸಗಿ ವೈದ್ಯರನ್ನು ಸಂಪರ್ಕಿಸಲು ಹೋಗಿ ಕ್ಲಿನಿಕ್ ಹೊರಗಡೆ ಕುಸಿದು ಬಿದ್ದು ಅಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/week-after-launch-itbp-run-covid-centre-remains-under-utilised-due-to-lack-of-oxygen-medicines-827960.html" itemprop="url">ವಾರದ ಹಿಂದೆ ಆರಂಭವಾದ ಕೋವಿಡ್ ಆರೈಕೆ ಕೇಂದ್ರದಲ್ಲೂ ಆಮ್ಲಜನಕ, ಸೌಲಭ್ಯ ಕೊರತೆ </a></p>.<p>ಪೊಲೀಸರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ತಲುಪಿಸಿದರು. ಬಳಿಕ ನಡೆಸಿದ ಆ್ಯಂಟಿಜೆನ್ ಪರೀಕ್ಷೆಯಲ್ಲಿ ಮೃತ ವ್ಯಕ್ತಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಮೃತದೇಹವನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಆದರೆ ಮೃತದೇಹವನ್ನು ಸಾಗಿಸಲು ಆಂಬುಲೆನ್ಸ್ ಲಭ್ಯವಿರಲಿಲ್ಲ.</p>.<p>ಟೆರ್ ಆಸ್ಪತ್ರೆಯಲ್ಲಿರುವ ಆಂಬ್ಯುಲೆನ್ಸ್ ಅನ್ನು ಗರ್ಭಿಣಿಯರಿಗಾಗಿ ಮಾತ್ರ ಮೀಸಲಿರಿಸಲಾಗಿತ್ತು. ಅದನ್ನು ಕೋವಿಡ್ ರೋಗಿಗಳಿಗೆ ಬಳಸುವಂತಿಲ್ಲ. ಆದರೂ ಮೃತದೇಹವನ್ನು ಸ್ಮಶಾನಕ್ಕೆ ಸಾಗಿಸಲು ಆಟೋರಿಕ್ಷಾ ಸೇರಿದಂತೆ ಇತರೆ ಖಾಸಗಿ ವಾಹನಗಳನ್ನು ಸಂಪರ್ಕಿಸಲಾಯಿತು. ಆದರೆ ಎಲ್ಲರೂ ನಿರಾಕರಿಸಿದರುಎಂದು ಕಿನ್ಹಿ ಗ್ರಾಮದ ಸರಪಂಚ್ ವಿಜಯ್ ಹಜ್ಗಡೆ ಹೇಳಿದ್ದಾರೆ.</p>.<p>ಅಂತಿಮವಾಗಿ ತ್ಯಾಜ್ಯ ವಿಲೇವಾರಿ ಟ್ರಕ್ನಲ್ಲಿಮೃತದೇಹದ ಅಂತಿಮ ಯಾತ್ರೆಯನ್ನು ನಡೆಸಲಾಯಿತು ಎಂದವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಂಗಾಬಾದ್: ಆಂಬುಲೆನ್ಸ್ ಲಭ್ಯವಿಲ್ಲದ ಕಾರಣ ಕೋವಿಡ್-19 ರೋಗಿಯ ಮೃತದೇಹವನ್ನು ಕಸದ ವಾಹನದಲ್ಲೇ ಸ್ಮಶಾನಕ್ಕೆ ಸಾಗಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿವೆ.</p>.<p>ಮಹಾರಾಷ್ಟ್ರದ ಒಸ್ಮನಾಬಾದ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಹೆಚ್ಚುವರಿ ಹಣ ನೀಡುವುದಾಗಿ ಹೇಳಿದರೂ ಖಾಸಗಿ ವಾಹನಗಳು ಮೃತದೇಹವನ್ನು ಸಾಗಿಸಲು ಹಿಂದೇಟು ಹಾಕಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸೋಮವಾರದಂದು ಕಿನ್ಹಿ ಗ್ರಾಮದ ನಿವಾಸಿಯೊಬ್ಬರು ಏಳು ಕಿ.ಮೀ. ದೂರದಲ್ಲಿರುವ ನೆರೆಯ ಟೆರ್ ಗ್ರಾಮದ ಖಾಸಗಿ ವೈದ್ಯರನ್ನು ಸಂಪರ್ಕಿಸಲು ಹೋಗಿ ಕ್ಲಿನಿಕ್ ಹೊರಗಡೆ ಕುಸಿದು ಬಿದ್ದು ಅಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/week-after-launch-itbp-run-covid-centre-remains-under-utilised-due-to-lack-of-oxygen-medicines-827960.html" itemprop="url">ವಾರದ ಹಿಂದೆ ಆರಂಭವಾದ ಕೋವಿಡ್ ಆರೈಕೆ ಕೇಂದ್ರದಲ್ಲೂ ಆಮ್ಲಜನಕ, ಸೌಲಭ್ಯ ಕೊರತೆ </a></p>.<p>ಪೊಲೀಸರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ತಲುಪಿಸಿದರು. ಬಳಿಕ ನಡೆಸಿದ ಆ್ಯಂಟಿಜೆನ್ ಪರೀಕ್ಷೆಯಲ್ಲಿ ಮೃತ ವ್ಯಕ್ತಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಮೃತದೇಹವನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಆದರೆ ಮೃತದೇಹವನ್ನು ಸಾಗಿಸಲು ಆಂಬುಲೆನ್ಸ್ ಲಭ್ಯವಿರಲಿಲ್ಲ.</p>.<p>ಟೆರ್ ಆಸ್ಪತ್ರೆಯಲ್ಲಿರುವ ಆಂಬ್ಯುಲೆನ್ಸ್ ಅನ್ನು ಗರ್ಭಿಣಿಯರಿಗಾಗಿ ಮಾತ್ರ ಮೀಸಲಿರಿಸಲಾಗಿತ್ತು. ಅದನ್ನು ಕೋವಿಡ್ ರೋಗಿಗಳಿಗೆ ಬಳಸುವಂತಿಲ್ಲ. ಆದರೂ ಮೃತದೇಹವನ್ನು ಸ್ಮಶಾನಕ್ಕೆ ಸಾಗಿಸಲು ಆಟೋರಿಕ್ಷಾ ಸೇರಿದಂತೆ ಇತರೆ ಖಾಸಗಿ ವಾಹನಗಳನ್ನು ಸಂಪರ್ಕಿಸಲಾಯಿತು. ಆದರೆ ಎಲ್ಲರೂ ನಿರಾಕರಿಸಿದರುಎಂದು ಕಿನ್ಹಿ ಗ್ರಾಮದ ಸರಪಂಚ್ ವಿಜಯ್ ಹಜ್ಗಡೆ ಹೇಳಿದ್ದಾರೆ.</p>.<p>ಅಂತಿಮವಾಗಿ ತ್ಯಾಜ್ಯ ವಿಲೇವಾರಿ ಟ್ರಕ್ನಲ್ಲಿಮೃತದೇಹದ ಅಂತಿಮ ಯಾತ್ರೆಯನ್ನು ನಡೆಸಲಾಯಿತು ಎಂದವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>