ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ಪುನರ್‌ರಚನೆ ಸಾಧ್ಯತೆ: ಪ್ರಿಯಾಂಕಾ ಭೇಟಿ ಮಾಡಿದ ಸಿಎಂ ಗೆಹಲೋತ್

Last Updated 10 ನವೆಂಬರ್ 2021, 20:06 IST
ಅಕ್ಷರ ಗಾತ್ರ

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್ ಅವರು ಕಾಂಗ್ರೆಸ್‌ನ ಹಿರಿಯ ಮುಖಂಡರನ್ನು ಬುಧವಾರ ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ.

ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಮುಖ್ಯಮಂತ್ರಿ ಗೆಹಲೋತ್‌ ಅವರ ಈ ಭೇಟಿ ಕುತೂಹಲ ಕೆರಳಿಸಿದೆ.

ಮುಖಂಡ ರಾಹುಲ್‌ ಗಾಂಧಿ ನಿವಾಸದಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗೆಹಲೋತ್‌ ಅವರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಈ ವೇಳೆ ರಾಹುಲ್‌ ಗಾಂಧಿ ಅವರು ಇರಲಿಲ್ಲ. ಮುಖಂಡರಾದ ಅಜಯ್ ಮಾಕೇನ್ ಹಾಗೂ ಕೆ.ಸಿ.ವೇಣುಗೋಪಾಲ್‌ ಇದ್ದರು ಎಂದು ಮೂಲಗಳು ಹೇಳಿವೆ.

ಸಂಭಾವ್ಯ ವಿಸ್ತರಣೆಯಲ್ಲಿ ಸಚಿನ್‌ ಪೈಲಟ್ ಬೆಂಬಲಿಗರು ಸೇರಿದಂತೆ ಎಲ್ಲ ಗುಂಪುಗಳಿಗೆ ಪ್ರಾತಿನಿಧ್ಯ ನೀಡಬೇಕಾದ ಒತ್ತಡದಲ್ಲಿ ಗೆಹಲೋತ್‌ ಇದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರೊಂದಿಗಿನ ಭೇಟಿ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT