ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಇಂಧನ ಬೆಲೆ ಏರಿಕೆ ಸನ್ನಿಹಿತವಾಗಿದೆ. ಚುನಾವಣೆ ಕೊಡುಗೆ ಮುಗಿಯುವ ಮುನ್ನವೇ ತಮ್ಮ ತಮ್ಮ ಪೆಟ್ರೋಲ್ ಟ್ಯಾಂಕ್ಗಳನ್ನು ತುಂಬಿಸಿಕೊಳ್ಳಿ ಎಂದು ಜನರಿಗೆ ಕರೆ ನೀಡಿದ್ದಾರೆ.
ಇಂಧನ ದರ ಏರಿಕೆಗೆ ಸಂಬಂಧಿಸಿದಂತೆ ಟ್ವಿಟರ್ನಲ್ಲಿ ಪೆಟ್ರೋಲ್ ಬಂಕ್ ಚಿತ್ರವೊಂದನ್ನು ಹಂಚಿಕೊಂಡಿರುವ ರಾಹುಲ್, 'ಕೂಡಲೇ ನಿಮ್ಮ ಪೆಟ್ರೋಲ್ ಟ್ಯಾಂಕ್ಗಳನ್ನು ಭರ್ತಿಮಾಡಿಕೊಳ್ಳಿ. ಮೋದಿ ಸರ್ಕಾರದ ಚುನಾವಣಾ ಕೊಡುಗೆ ಸದ್ಯದಲ್ಲೇ ಕೊನೆಯಾಗಲಿದೆ' ಎಂದು ಹೇಳಿದ್ದಾರೆ.