<p><strong>ನವದೆಹಲಿ:</strong> ಕೃಷಿ ಮಸೂದೆಗಳು ಮತ್ತು ಎಂಟು ಸಂಸದರ ಅಮಾನತುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಮತ್ತು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಗುಲಾಂ ನಬಿ ಅಜಾದ್ ಅವರು ಬುಧವಾರ ಸಂಜೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಲಿದ್ದಾರೆ.</p>.<p>‘ರಾಷ್ಟ್ರಪತಿ ಅವರ ಭೇಟಿಗೆಸಂಜೆ 5 ಗಂಟೆಗೆ ಸಮಯ ನಿಗದಿಯಾಗಿದೆ’ ಎಂದು ಆಜಾದ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ 16ಕ್ಕೂ ಹೆಚ್ಚು ಪಕ್ಷಗಳು ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ್ದವು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಾಂಗ್ರೆಸ್, ಟಿಎಂಸಿ, ಟಿಆರ್ಎಸ್ ಮತ್ತು ಡಿಎಂಕೆ ಪಕ್ಷಗಳ ಐವರು ಪ್ರತಿನಿಧಿಗಳು ರಾಷ್ಟ್ರಪತಿಯವರನ್ನು ಭೇಟಿಯಾಗಲು ಈ ಮೊದಲು ತೀರ್ಮಾನಿಸಿದ್ದವು. ನಂತರ ಶಿವಸೇನಾ ಮತ್ತು ಎನ್ಸಿಪಿ ಪ್ರತಿನಿಧಿಗಳು ಈ ಭೇಟಿಯಲ್ಲಿ ಜತೆಯಾಗುವುದಾಗಿ ತಿಳಿದುಬಂದಿತ್ತು. ಅಂತಿಮವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರೊಬ್ಬರನ್ನೇ ರಾಷ್ಟ್ರಪತಿಯವರ ಭೇಟಿಗೆ ಕಳುಹಿಸುವುದು ಸೂಕ್ತ ಎಂಬ ಒಮ್ಮತಕ್ಕೆ ಇತರ ವಿರೋಧ ಪಕ್ಷಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೃಷಿ ಮಸೂದೆಗಳು ಮತ್ತು ಎಂಟು ಸಂಸದರ ಅಮಾನತುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಮತ್ತು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಗುಲಾಂ ನಬಿ ಅಜಾದ್ ಅವರು ಬುಧವಾರ ಸಂಜೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಲಿದ್ದಾರೆ.</p>.<p>‘ರಾಷ್ಟ್ರಪತಿ ಅವರ ಭೇಟಿಗೆಸಂಜೆ 5 ಗಂಟೆಗೆ ಸಮಯ ನಿಗದಿಯಾಗಿದೆ’ ಎಂದು ಆಜಾದ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ 16ಕ್ಕೂ ಹೆಚ್ಚು ಪಕ್ಷಗಳು ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ್ದವು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಾಂಗ್ರೆಸ್, ಟಿಎಂಸಿ, ಟಿಆರ್ಎಸ್ ಮತ್ತು ಡಿಎಂಕೆ ಪಕ್ಷಗಳ ಐವರು ಪ್ರತಿನಿಧಿಗಳು ರಾಷ್ಟ್ರಪತಿಯವರನ್ನು ಭೇಟಿಯಾಗಲು ಈ ಮೊದಲು ತೀರ್ಮಾನಿಸಿದ್ದವು. ನಂತರ ಶಿವಸೇನಾ ಮತ್ತು ಎನ್ಸಿಪಿ ಪ್ರತಿನಿಧಿಗಳು ಈ ಭೇಟಿಯಲ್ಲಿ ಜತೆಯಾಗುವುದಾಗಿ ತಿಳಿದುಬಂದಿತ್ತು. ಅಂತಿಮವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರೊಬ್ಬರನ್ನೇ ರಾಷ್ಟ್ರಪತಿಯವರ ಭೇಟಿಗೆ ಕಳುಹಿಸುವುದು ಸೂಕ್ತ ಎಂಬ ಒಮ್ಮತಕ್ಕೆ ಇತರ ವಿರೋಧ ಪಕ್ಷಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>