ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಭೇಟಿಯಾಗಲಿರುವ ಗುಲಾಂ‌ನಬಿ ಅಜಾದ್

ಇಂದು ಸಂಜೆ 5 ಗಂಟೆಗೆ ಸಮಯ ನಿಗದಿ
Last Updated 23 ಸೆಪ್ಟೆಂಬರ್ 2020, 8:17 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಮಸೂದೆಗಳು ಮತ್ತು ಎಂಟು ಸಂಸದರ ಅಮಾನತುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಮತ್ತು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಗುಲಾಂ ನಬಿ ಅಜಾದ್ ಅವರು ಬುಧವಾರ ಸಂಜೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಲಿದ್ದಾರೆ.

‘ರಾಷ್ಟ್ರಪತಿ ಅವರ ಭೇಟಿಗೆಸಂಜೆ 5 ಗಂಟೆಗೆ ಸಮಯ ನಿಗದಿಯಾಗಿದೆ’ ಎಂದು ಆಜಾದ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ 16ಕ್ಕೂ ಹೆಚ್ಚು ಪಕ್ಷಗಳು ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ್ದವು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಾಂಗ್ರೆಸ್, ಟಿಎಂಸಿ, ಟಿಆರ್‌ಎಸ್‌ ಮತ್ತು ಡಿಎಂಕೆ ಪಕ್ಷಗಳ ಐವರು ಪ್ರತಿನಿಧಿಗಳು ರಾಷ್ಟ್ರಪತಿಯವರನ್ನು ಭೇಟಿಯಾಗಲು ಈ ಮೊದಲು ತೀರ್ಮಾನಿಸಿದ್ದವು. ನಂತರ ಶಿವಸೇನಾ ಮತ್ತು ಎನ್‌ಸಿಪಿ ಪ್ರತಿನಿಧಿಗಳು ಈ ಭೇಟಿಯಲ್ಲಿ ಜತೆಯಾಗುವುದಾಗಿ ತಿಳಿದುಬಂದಿತ್ತು. ಅಂತಿಮವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರೊಬ್ಬರನ್ನೇ ರಾಷ್ಟ್ರಪತಿಯವರ ಭೇಟಿಗೆ ಕಳುಹಿಸುವುದು ಸೂಕ್ತ ಎಂಬ ಒಮ್ಮತಕ್ಕೆ ಇತರ ವಿರೋಧ ಪಕ್ಷಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT