<p><strong>ತಿರುವನಂತಪುರ:</strong> ಉತ್ತರ ಪ್ರದೇಶದ ವಲಸೆ ಕಾರ್ಮಿಕರು ಬಾಲಕಿಯ ಮೇಲೆ ಸತತ ಆರು ತಿಂಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.</p>.<p>ಪ್ರಕರಣ ಸಂಬಂಧ, ಶಾಹಿದ್ (24), ಫರ್ಹಾದ್ ಖಾನ್ (29), ಹನೀಫ್ (28) ಎಂಬುವರನ್ನು ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳು ಉತ್ತರ ಪ್ರದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಅವರ ಶೋಧಕ್ಕಾಗಿ ಕೊಚ್ಚಿ ಪೊಲೀಸರ ತಂಡ ಶೀಘ್ರವೇ ಉತ್ತರ ಪ್ರದೇಶಕ್ಕೆ ತೆರಳಲಿದೆ.</p>.<p>14 ವರ್ಷದ ಬಾಲಕಿ ಕೊಚ್ಚಿ ನಗರದ ಎಲೂರು ಬಳಿಯ ಅಜ್ಜಿ ಮನೆಯಲ್ಲಿ ತಂಗಿದ್ದಳು. ಆರೋಪಿಗಳು ಆಕೆಯ ಮನೆಯ ಹತ್ತಿರವೇ ನೆಲೆಸಿದ್ದರು ಎನ್ನಲಾಗಿದೆ.</p>.<p>ಕಳೆದ ಮಾರ್ಚ್ ತಿಂಗಳ ಲಾಕ್ಡೌನ್ ಸಮಯದಲ್ಲಿ ಮೊದಲ ಬಾರಿಗೆ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ.ನಂತರ, ಈ ತಿಂಗಳ ಆರಂಭದವರೆಗೂ ಹಲವು ಸ್ಥಳಗಳಿಗೆ ಕರೆದೊಯ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಬಾಲಕಿ ವಿಷಯವನ್ನು ಯಾರ ಬಳಿಯೂ ಹೇಳಿರಲಿಲ್ಲ.</p>.<p>ಶಾಲಾ ಮಕ್ಕಳಿಗಾಗಿ ಇತ್ತೀಚೆಗೆ ನಡೆದ ಆಪ್ತಸಮಾಲೋಚನೆ ಸಂದರ್ಭದಲ್ಲಿ ಬಾಲಕಿ ಈ ವಿಷಯ ಬಹಿರಂಗಪಡಿಸಿದ್ದಾಳೆ. ಆಕೆ ಖಿನ್ನತೆಗೆ ಒಳಗಾಗಿದ್ದಾಳೆ ಎನ್ನಲಾಗಿದೆ.</p>.<p>ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಬಂಧನಕ್ಕೊಳಗಾದ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಈ ಆರೋಪಿಗಳು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಉತ್ತರ ಪ್ರದೇಶದ ವಲಸೆ ಕಾರ್ಮಿಕರು ಬಾಲಕಿಯ ಮೇಲೆ ಸತತ ಆರು ತಿಂಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.</p>.<p>ಪ್ರಕರಣ ಸಂಬಂಧ, ಶಾಹಿದ್ (24), ಫರ್ಹಾದ್ ಖಾನ್ (29), ಹನೀಫ್ (28) ಎಂಬುವರನ್ನು ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳು ಉತ್ತರ ಪ್ರದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಅವರ ಶೋಧಕ್ಕಾಗಿ ಕೊಚ್ಚಿ ಪೊಲೀಸರ ತಂಡ ಶೀಘ್ರವೇ ಉತ್ತರ ಪ್ರದೇಶಕ್ಕೆ ತೆರಳಲಿದೆ.</p>.<p>14 ವರ್ಷದ ಬಾಲಕಿ ಕೊಚ್ಚಿ ನಗರದ ಎಲೂರು ಬಳಿಯ ಅಜ್ಜಿ ಮನೆಯಲ್ಲಿ ತಂಗಿದ್ದಳು. ಆರೋಪಿಗಳು ಆಕೆಯ ಮನೆಯ ಹತ್ತಿರವೇ ನೆಲೆಸಿದ್ದರು ಎನ್ನಲಾಗಿದೆ.</p>.<p>ಕಳೆದ ಮಾರ್ಚ್ ತಿಂಗಳ ಲಾಕ್ಡೌನ್ ಸಮಯದಲ್ಲಿ ಮೊದಲ ಬಾರಿಗೆ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ.ನಂತರ, ಈ ತಿಂಗಳ ಆರಂಭದವರೆಗೂ ಹಲವು ಸ್ಥಳಗಳಿಗೆ ಕರೆದೊಯ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಬಾಲಕಿ ವಿಷಯವನ್ನು ಯಾರ ಬಳಿಯೂ ಹೇಳಿರಲಿಲ್ಲ.</p>.<p>ಶಾಲಾ ಮಕ್ಕಳಿಗಾಗಿ ಇತ್ತೀಚೆಗೆ ನಡೆದ ಆಪ್ತಸಮಾಲೋಚನೆ ಸಂದರ್ಭದಲ್ಲಿ ಬಾಲಕಿ ಈ ವಿಷಯ ಬಹಿರಂಗಪಡಿಸಿದ್ದಾಳೆ. ಆಕೆ ಖಿನ್ನತೆಗೆ ಒಳಗಾಗಿದ್ದಾಳೆ ಎನ್ನಲಾಗಿದೆ.</p>.<p>ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಬಂಧನಕ್ಕೊಳಗಾದ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಈ ಆರೋಪಿಗಳು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>