<p><strong>ನವದೆಹಲಿ</strong>: 14 ವರ್ಷದ ಬಾಲಕಿಯೊಬ್ಬಳು ಪರೀಕ್ಷೆಯನ್ನು ಸರಿಯಾಗಿ ಬರೆಯದಿದ್ದ ಕಾರಣ ಬ್ಲೇಡ್ನಿಂದ ತನಗೆ ತಾನೇ ಹಾನಿ ಮಾಡಿಕೊಂಡು, ಲೈಂಗಿಕ ಕಿರುಕುಳದ ಸುಳ್ಳು ಕಥೆ ಸೃಷ್ಠಿ ಮಾಡಿರುವ ಘಟನೆ ಇಲ್ಲಿನ ಭಜನ್ಪುರ ನಡೆದಿದೆ.</p>.<p>ಪೋಷಕರ ಬೈಗುಳದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶಾಲೆಯ ಅವಧಿ ಮುಗಿದ ನಂತರ ಹುಡುಗರು ನನ್ನನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಿದ್ದಳು. ಆದರೆ ಆಕೆ ಪರೀಕ್ಷೆಯಲ್ಲಿ ಸರಿಯಾಗಿ ಬರೆಯದ ಕಾರಣ ಸುಳ್ಳು ಕಥೆ ಸೃಷ್ಟಿಸಿದ್ದಳು.</p>.<p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದರು. ಈ ವೇಳೆ ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರೀಶಿಲಿಸಿದಾಗ ಆಕೆ ಒಬ್ಬಳೇ ರಸ್ತೆ ಬದಿಯಲ್ಲಿ ಕುಳಿತು, ಬ್ಲೇಡ್ನಿಂದ ತನಗೆ ತಾನೇ ಹಾನಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸರು ಆಕೆಯನ್ನು ವಿಚಾರಿಸಿದಾಗ ಸತ್ಯವನ್ನು ಬಹಿರಂಗ ಪಡಿಸಿದ್ದಾಳೆ ಎಂದು ಪೊಲೀಸ್ ಉಪ ಆಯುಕ್ತ ಜಾಯ್ ಟಿರ್ಕಿ ಮಾಹಿತಿ ನೀಡಿದ್ದಾರೆ.</p>.<p>ಪೋಕ್ಸೋ ಕಾಯಿದೆಯಡಿ ದಾಖಲಿಸಿಕೊಂಡಿದ್ದ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 14 ವರ್ಷದ ಬಾಲಕಿಯೊಬ್ಬಳು ಪರೀಕ್ಷೆಯನ್ನು ಸರಿಯಾಗಿ ಬರೆಯದಿದ್ದ ಕಾರಣ ಬ್ಲೇಡ್ನಿಂದ ತನಗೆ ತಾನೇ ಹಾನಿ ಮಾಡಿಕೊಂಡು, ಲೈಂಗಿಕ ಕಿರುಕುಳದ ಸುಳ್ಳು ಕಥೆ ಸೃಷ್ಠಿ ಮಾಡಿರುವ ಘಟನೆ ಇಲ್ಲಿನ ಭಜನ್ಪುರ ನಡೆದಿದೆ.</p>.<p>ಪೋಷಕರ ಬೈಗುಳದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶಾಲೆಯ ಅವಧಿ ಮುಗಿದ ನಂತರ ಹುಡುಗರು ನನ್ನನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಿದ್ದಳು. ಆದರೆ ಆಕೆ ಪರೀಕ್ಷೆಯಲ್ಲಿ ಸರಿಯಾಗಿ ಬರೆಯದ ಕಾರಣ ಸುಳ್ಳು ಕಥೆ ಸೃಷ್ಟಿಸಿದ್ದಳು.</p>.<p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದರು. ಈ ವೇಳೆ ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರೀಶಿಲಿಸಿದಾಗ ಆಕೆ ಒಬ್ಬಳೇ ರಸ್ತೆ ಬದಿಯಲ್ಲಿ ಕುಳಿತು, ಬ್ಲೇಡ್ನಿಂದ ತನಗೆ ತಾನೇ ಹಾನಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸರು ಆಕೆಯನ್ನು ವಿಚಾರಿಸಿದಾಗ ಸತ್ಯವನ್ನು ಬಹಿರಂಗ ಪಡಿಸಿದ್ದಾಳೆ ಎಂದು ಪೊಲೀಸ್ ಉಪ ಆಯುಕ್ತ ಜಾಯ್ ಟಿರ್ಕಿ ಮಾಹಿತಿ ನೀಡಿದ್ದಾರೆ.</p>.<p>ಪೋಕ್ಸೋ ಕಾಯಿದೆಯಡಿ ದಾಖಲಿಸಿಕೊಂಡಿದ್ದ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>