<p><strong>ಮುಂಬೈ: </strong>ತೌತೆ ಚಂಡಮಾರುತದಿಂದಾಗಿ ಮಹಾರಾಷ್ಟ್ರ, ಗೋವಾ ಸೇರಿದಂತೆ ಆರು ರಾಜ್ಯಗಳಲ್ಲಿ ಭಾರಿ ಹಾನಿ ಆಗಿದೆ. ಆದರೆ ಕೇಂದ್ರ ಸರ್ಕಾರವು ಗುಜರಾತ್ ರಾಜ್ಯಕ್ಕೆ ಮಾತ್ರ ಆರ್ಥಿಕ ನೆರವನ್ನು ಘೋಷಿಸಿದೆ ಎಂದು ಎನ್ಸಿಪಿ ಆಕ್ಷೇಪಿಸಿದೆ.</p>.<p>ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಕೂಡ ಪ್ರಧಾನಿ ಅವರು ಶೀಘ್ರವೇ ನೆರವು ಪ್ರಕಟಿಸಲಿದ್ದಾರೆ ಎಂದು ಮಹಾರಾಷ್ಟ್ರದಲ್ಲಿ ಎನ್ಸಿಪಿ ಮತ್ತು ಕಾಂಗ್ರೆಸ್ನೊಂದಿಗೆ ಅಧಿಕಾರ ಹಂಚಿಕೊಂಡಿರುವ ಶಿವಸೇನಾ ವಿಶ್ವಾಸ ವ್ಯಕ್ತಪಡಿಸಿದೆ.</p>.<p>ಬಿಜೆಪಿ ನಾಯಕ ದೇವೇಂದ್ರ ಘಡಣವೀಸ್ ಅವರು, ಚಂಡಮಾರುತದಿಂದ ಹಾನಿಗೊಳಗಾದ ಎಲ್ಲ ರಾಜ್ಯಗಳಿಗೆ ಪ್ರಧಾನಿ ಮೋದಿ ಅವರು ನೆರವು ಪ್ರಕಟಿಸುವುದಾಗಿ ಹೇಳಿದ್ದಾರೆ ಎಂದರು.</p>.<p>ಪ್ರಧಾನಿ ಅವರು ಗುಜರಾತ್ಗೆ ಭೇಟಿ ನೀಡಿದ ವಿಷಯವನ್ನು ಮಹಾ ವಿಕಾಸ್ ಅಘಾಡಿ ಸರ್ಕಾರವು ಉದ್ದೇಶಪೂರ್ವಕವಾಗಿಯೇ ವಿವಾದವಾಗಿ ಮಾಡಲು ಹೊರಟಿದೆ ಎಂದು ಫಡಣವೀಸ್ ಆರೋಪಿಸಿದರು.</p>.<p>ಶಿವಸೇನಾ ಸಂಸದ ಸಂಜಯ್ರಾವುತ್ ಅವರು, ಗುಜರಾತ್ಗೆ ₹ 1,000 ಕೋಟಿ ನೆರವು ಘೋಷಿಸಿದ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಗುಜರಾತ್ ಕೂಡ ಭಾರತಕ್ಕೇ ಸೇರಿದೆ ಅಲ್ಲದೆ ಚಂಡಮಾರುತದಿಂದ ತೊಂದರೆಗೆ ಒಳಗಾಗಿದೆ ಎಂದಿದ್ದಾರೆ.</p>.<p>ಮುಖ್ಯಮಂತ್ರಿ ಉದ್ಧವ್ ಅವರು ರಾಜ್ಯದಲ್ಲಿ ತೊಂದರೆಗೆ ಒಳಗಾಗಿರುವ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡುವರು. ಯಾವ ರೀತಿಯ ನೆರವು ಬೇಕು ಎಂಬ ಬಗ್ಗೆ ವಿವರವಾಗಿ ಮನವಿ ಸಿದ್ಧಪಡಿಸಲಾಗಿದೆ. ಕೇಂದ್ರ ಸರ್ಕಾರವು ಮಹಾರಾಷ್ಟ್ರಕ್ಕೆ ₹ 1,500 ಮತ್ತು ಗೋವಾಕ್ಕೆ ₹ 500 ಕೋಟಿ ನೆರವು ಪ್ರಕಟಿಸುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ತೌತೆ ಚಂಡಮಾರುತದಿಂದಾಗಿ ಮಹಾರಾಷ್ಟ್ರ, ಗೋವಾ ಸೇರಿದಂತೆ ಆರು ರಾಜ್ಯಗಳಲ್ಲಿ ಭಾರಿ ಹಾನಿ ಆಗಿದೆ. ಆದರೆ ಕೇಂದ್ರ ಸರ್ಕಾರವು ಗುಜರಾತ್ ರಾಜ್ಯಕ್ಕೆ ಮಾತ್ರ ಆರ್ಥಿಕ ನೆರವನ್ನು ಘೋಷಿಸಿದೆ ಎಂದು ಎನ್ಸಿಪಿ ಆಕ್ಷೇಪಿಸಿದೆ.</p>.<p>ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಕೂಡ ಪ್ರಧಾನಿ ಅವರು ಶೀಘ್ರವೇ ನೆರವು ಪ್ರಕಟಿಸಲಿದ್ದಾರೆ ಎಂದು ಮಹಾರಾಷ್ಟ್ರದಲ್ಲಿ ಎನ್ಸಿಪಿ ಮತ್ತು ಕಾಂಗ್ರೆಸ್ನೊಂದಿಗೆ ಅಧಿಕಾರ ಹಂಚಿಕೊಂಡಿರುವ ಶಿವಸೇನಾ ವಿಶ್ವಾಸ ವ್ಯಕ್ತಪಡಿಸಿದೆ.</p>.<p>ಬಿಜೆಪಿ ನಾಯಕ ದೇವೇಂದ್ರ ಘಡಣವೀಸ್ ಅವರು, ಚಂಡಮಾರುತದಿಂದ ಹಾನಿಗೊಳಗಾದ ಎಲ್ಲ ರಾಜ್ಯಗಳಿಗೆ ಪ್ರಧಾನಿ ಮೋದಿ ಅವರು ನೆರವು ಪ್ರಕಟಿಸುವುದಾಗಿ ಹೇಳಿದ್ದಾರೆ ಎಂದರು.</p>.<p>ಪ್ರಧಾನಿ ಅವರು ಗುಜರಾತ್ಗೆ ಭೇಟಿ ನೀಡಿದ ವಿಷಯವನ್ನು ಮಹಾ ವಿಕಾಸ್ ಅಘಾಡಿ ಸರ್ಕಾರವು ಉದ್ದೇಶಪೂರ್ವಕವಾಗಿಯೇ ವಿವಾದವಾಗಿ ಮಾಡಲು ಹೊರಟಿದೆ ಎಂದು ಫಡಣವೀಸ್ ಆರೋಪಿಸಿದರು.</p>.<p>ಶಿವಸೇನಾ ಸಂಸದ ಸಂಜಯ್ರಾವುತ್ ಅವರು, ಗುಜರಾತ್ಗೆ ₹ 1,000 ಕೋಟಿ ನೆರವು ಘೋಷಿಸಿದ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಗುಜರಾತ್ ಕೂಡ ಭಾರತಕ್ಕೇ ಸೇರಿದೆ ಅಲ್ಲದೆ ಚಂಡಮಾರುತದಿಂದ ತೊಂದರೆಗೆ ಒಳಗಾಗಿದೆ ಎಂದಿದ್ದಾರೆ.</p>.<p>ಮುಖ್ಯಮಂತ್ರಿ ಉದ್ಧವ್ ಅವರು ರಾಜ್ಯದಲ್ಲಿ ತೊಂದರೆಗೆ ಒಳಗಾಗಿರುವ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡುವರು. ಯಾವ ರೀತಿಯ ನೆರವು ಬೇಕು ಎಂಬ ಬಗ್ಗೆ ವಿವರವಾಗಿ ಮನವಿ ಸಿದ್ಧಪಡಿಸಲಾಗಿದೆ. ಕೇಂದ್ರ ಸರ್ಕಾರವು ಮಹಾರಾಷ್ಟ್ರಕ್ಕೆ ₹ 1,500 ಮತ್ತು ಗೋವಾಕ್ಕೆ ₹ 500 ಕೋಟಿ ನೆರವು ಪ್ರಕಟಿಸುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>