ಕೇಂದ್ರ ಸಚಿವ ಶ್ರೀಪಾದ ನಾಯಕ ಅವರ ಮಗ ಸಿದ್ದೇಶ್ ಅವರು ಕ್ಯುಂಭರುಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ದೊರೆಯದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದರು. ಆದರೆ, ಅವರ ಮನವೊಲಿಸಲು ಬಿಜೆಪಿ ಯಶಸ್ವಿಯಾಗಿದೆ. ಶಾಸಕ ಪಾಂಡುರಂಗ ಮದಕೈಕರ್ ಅವರ ಹೆಂಡತಿ ಜೈನಿತಾ ಮದಕೈಕರ್ ಅವರು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ. ಆದರೆ, ಬಿಜೆಪಿಯಲ್ಲಿದ್ದ ರೋಹನ್ ಹರ್ಮಲ್ಕರ್ ಅವರು ಈ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ.