<p><strong>ಪಣಜಿ:</strong> ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥವಾಗುವ ಸಾಧ್ಯತೆಯನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶುಕ್ರವಾರ ತಳ್ಳಿ ಹಾಕಿದ್ದಾರೆ.</p>.<p>ಗೋವಾ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳು ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ (ಎಸ್ಎಲ್ಪಿ) ಸಲ್ಲಿಸಿವೆ.</p>.<p>‘ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ನಾವು ಯಾವುದೇ ರೀತಿಯ ನ್ಯಾಯಾಲಯದ ಹೊರಗೆ ಇತ್ಯರ್ಥಕ್ಕೆ ನಾವು ಸಿದ್ಧರಿಲ್ಲ. ನಮ್ಮ ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಉಳಿದಿವೆ. ನಾವು ನ್ಯಾಯಾಲಯದಲ್ಲೇ ಹೋರಾಟ ಮುಂದುವರಿಸುತ್ತೇವೆ’ ಎಂದು ಸಾವಂತ್ ತಿಳಿಸಿದ್ದಾರೆ.</p>.<p>ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಂತರರಾಜ್ಯ ನೀರಿನ ವಿವಾದದ ಬಗ್ಗೆ ಚರ್ಚಿಸಲು ಕಳುಹಿಸಿದ ಅಧಿಕಾರಿಗಳ ಭೇಟಿಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.</p>.<p>‘ನಮ್ಮ ಬೇಡಿಕೆಯೆಂದರೆ ನಮ್ಮ ನೀರನ್ನು ಬೇರೆಡೆಗೆ ತಿರುಗಿಸಿರುವ ಕರ್ನಾಟಕ ನಮ್ಮ ಪಾಲಿನ ನೀರನ್ನು ತಕ್ಷಣ ಬಿಡುಗಡೆ ಮಾಡಬೇಕು. ಮಹಾದಾಯಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ ಎಂದು ನನಗೆ ಸಂಪೂರ್ಣವಾಗಿ ತಿಳಿದಿದೆ’ ಎಂದು ಅವರು ಹೇಳಿದರು.</p>.<p>ಬಿಜೆಪಿಯ ಗೋವಾ ರಾಜ್ಯ ಉಸ್ತುವಾರಿ ಸಿ.ಟಿ.ರವಿ ಅವರೊಂದಿಗಿನ ಚರ್ಚೆಯ ಸಂದರ್ಭದಲ್ಲಿ ಕರ್ನಾಟಕದೊಂದಿಗೆ ಮಹದಾಯಿ ನದಿ ನೀರು ಹಂಚಿಕೆ ಕುರಿತು ಮಾತುಕತೆ ನಡೆಸಲಾಯಿತು’ ಎಂದು ಸಾವಂತ್ ಹೇಳಿದ್ದಾರೆ.</p>.<p>ಕರಾವಳಿ ರಾಜ್ಯದಲ್ಲಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡ ಬಳಿಕ ಸಿ.ಟಿ.ರವಿ ಈ ವಾರದ ಆರಂಭದಲ್ಲಿ ಗೋವಾಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥವಾಗುವ ಸಾಧ್ಯತೆಯನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶುಕ್ರವಾರ ತಳ್ಳಿ ಹಾಕಿದ್ದಾರೆ.</p>.<p>ಗೋವಾ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳು ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ (ಎಸ್ಎಲ್ಪಿ) ಸಲ್ಲಿಸಿವೆ.</p>.<p>‘ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ನಾವು ಯಾವುದೇ ರೀತಿಯ ನ್ಯಾಯಾಲಯದ ಹೊರಗೆ ಇತ್ಯರ್ಥಕ್ಕೆ ನಾವು ಸಿದ್ಧರಿಲ್ಲ. ನಮ್ಮ ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಉಳಿದಿವೆ. ನಾವು ನ್ಯಾಯಾಲಯದಲ್ಲೇ ಹೋರಾಟ ಮುಂದುವರಿಸುತ್ತೇವೆ’ ಎಂದು ಸಾವಂತ್ ತಿಳಿಸಿದ್ದಾರೆ.</p>.<p>ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಂತರರಾಜ್ಯ ನೀರಿನ ವಿವಾದದ ಬಗ್ಗೆ ಚರ್ಚಿಸಲು ಕಳುಹಿಸಿದ ಅಧಿಕಾರಿಗಳ ಭೇಟಿಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.</p>.<p>‘ನಮ್ಮ ಬೇಡಿಕೆಯೆಂದರೆ ನಮ್ಮ ನೀರನ್ನು ಬೇರೆಡೆಗೆ ತಿರುಗಿಸಿರುವ ಕರ್ನಾಟಕ ನಮ್ಮ ಪಾಲಿನ ನೀರನ್ನು ತಕ್ಷಣ ಬಿಡುಗಡೆ ಮಾಡಬೇಕು. ಮಹಾದಾಯಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ ಎಂದು ನನಗೆ ಸಂಪೂರ್ಣವಾಗಿ ತಿಳಿದಿದೆ’ ಎಂದು ಅವರು ಹೇಳಿದರು.</p>.<p>ಬಿಜೆಪಿಯ ಗೋವಾ ರಾಜ್ಯ ಉಸ್ತುವಾರಿ ಸಿ.ಟಿ.ರವಿ ಅವರೊಂದಿಗಿನ ಚರ್ಚೆಯ ಸಂದರ್ಭದಲ್ಲಿ ಕರ್ನಾಟಕದೊಂದಿಗೆ ಮಹದಾಯಿ ನದಿ ನೀರು ಹಂಚಿಕೆ ಕುರಿತು ಮಾತುಕತೆ ನಡೆಸಲಾಯಿತು’ ಎಂದು ಸಾವಂತ್ ಹೇಳಿದ್ದಾರೆ.</p>.<p>ಕರಾವಳಿ ರಾಜ್ಯದಲ್ಲಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡ ಬಳಿಕ ಸಿ.ಟಿ.ರವಿ ಈ ವಾರದ ಆರಂಭದಲ್ಲಿ ಗೋವಾಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>