ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘ಭಾರತ್ ಜೋಡೊ ಯಾತ್ರೆಯ ಯಶಸ್ಸು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಆಪರೇಷನ್ ಕೆಸರನ್ನು ವೇಗವಾಗಿ ಅನುಷ್ಠಾನಗೊಳಿಸಲಾಗಿದೆ’ ಎಂದು ಆರೋಪಿಸಿದ್ದಾರೆ.
‘ಬಿಜೆಪಿ ಆತಂಕದಲ್ಲಿದೆ. ಯಾತ್ರೆಯನ್ನು ದುರ್ಬಲಗೊಳಿಸಲು ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ. ನಾವು ನಿರಾತಂಕವಾಗಿ ಇದ್ದೇವೆ. ಬಿಜೆಪಿಯ ಈ ಕೊಳಕು ತಂತ್ರಗಳ ವಿರುದ್ಧ ನಾವು ಜಯ ಸಾಧಿಸುತ್ತೇವೆ’ ಎಂದು ತಿಳಿಸಿದ್ದಾರೆ.