<p><strong>ಪಣಜಿ:</strong> ಪಕ್ಷ ತೊರೆದು ಬಿಜೆಪಿ ಸೇರಿದ್ದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಕಾಂಗ್ರೆಸ್ ಹಾಗೂ ಮಹಾರಾಷ್ಟ್ರವಾದಿ ಗೋಮಾಂತರ ಪಾರ್ಟಿ (ಎಂಜಿಪಿ) ಸಲ್ಲಿಸಿದ್ದ ಅರ್ಜಿಗಳನ್ನು ಗೋವಾ ವಿಧಾನಸಭೆ ಸ್ಪೀಕರ್ ರಾಜೇಶ್ ಪಾಟ್ನೇಕರ್ ಮಂಗಳವಾರ ವಜಾಗೊಳಿಸಿದರು.</p>.<p>ಕಾಂಗ್ರೆಸ್ನ 10 ಹಾಗೂ ಎಂಜಿಪಿಯ ಇಬ್ಬರು ಶಾಸಕರು 2019ರಲ್ಲಿ ಬಿಜೆಪಿ ಸೇರಿದ್ದರು. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಈಗ ಬಿಜೆಪಿ ಶಾಸಕರ ಸಂಖ್ಯೆ 27 ಇದೆ.</p>.<p>ಕಾಂಗ್ರೆಸ್ನ ಗೋವಾ ಘಟಕದ ಅಧ್ಯಕ್ಷ ಗಿರೀಶ್ ಚೋಡಾನಕರ್, ಎಂಜಿಪಿಯ ಮುಖಂಡ ಸುದಿನ್ ಧವಳೀಕರ್ ಅವರು ಪ್ರತ್ಯೇಕ ಅರ್ಜಿ ಸಲ್ಲಿಸಿ, ತಮ್ಮ ಪಕ್ಷ ತೊರೆದು ಬಿಜೆಪಿ ಸೇರಿರುವ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದರು.</p>.<p>ಯಾವುದೇ ಕಾರಣಗಳನ್ನು ನೀಡದೆಯೇ ಈ ಎರಡೂ ಅರ್ಜಿಗಳನ್ನು ವಜಾಗೊಳಿಸಿ ಸ್ಪೀಕರ್ ಮೌಖಿಕ ಆದೇಶ ನೀಡಿದ್ದಾರೆ.</p>.<p>‘ಸ್ಪೀಕರ್ ಅವರ ಆದೇಶದ ಪ್ರತಿಗಾಗಿ ಕಾಯುತ್ತಿದ್ದೇವೆ. ಅದು ಕೈ ಸೇರಿದ ನಂತರ, ಕೋರ್ಟ್ ಮೊರೆ ಹೋಗುತ್ತೇವೆ’ ಎಂದು ಚೋಡಾನಕರ್ ಪರ ವಕೀಲ ಅಭಿಜಿತ್ ಗೋಸ್ವಾಮಿ ಪ್ರತಿಕ್ರಿಯಿಸಿದ್ದಾರೆ.</p>.<p>‘ಅರ್ಜಿ ವಜಾಗೊಳಿಸಲು ಸ್ಪೀಕರ್ ಅವರು ನೀಡಿರುವ ಕಾರಣಗಳನ್ನು ಪರಿಶೀಲಿಸಿದ ನಂತರ ನಮ್ಮ ಮುಂದಿನ ಕ್ರಮದ ಕುರಿತು ನಿರ್ಧರಿಸಲಾಗುವುದು’ ಎಂದು ಎಂಜಿಪಿ ಪರ ವಕೀಲ ಸಿ.ಎ.ಫೆರೀರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಪಕ್ಷ ತೊರೆದು ಬಿಜೆಪಿ ಸೇರಿದ್ದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಕಾಂಗ್ರೆಸ್ ಹಾಗೂ ಮಹಾರಾಷ್ಟ್ರವಾದಿ ಗೋಮಾಂತರ ಪಾರ್ಟಿ (ಎಂಜಿಪಿ) ಸಲ್ಲಿಸಿದ್ದ ಅರ್ಜಿಗಳನ್ನು ಗೋವಾ ವಿಧಾನಸಭೆ ಸ್ಪೀಕರ್ ರಾಜೇಶ್ ಪಾಟ್ನೇಕರ್ ಮಂಗಳವಾರ ವಜಾಗೊಳಿಸಿದರು.</p>.<p>ಕಾಂಗ್ರೆಸ್ನ 10 ಹಾಗೂ ಎಂಜಿಪಿಯ ಇಬ್ಬರು ಶಾಸಕರು 2019ರಲ್ಲಿ ಬಿಜೆಪಿ ಸೇರಿದ್ದರು. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಈಗ ಬಿಜೆಪಿ ಶಾಸಕರ ಸಂಖ್ಯೆ 27 ಇದೆ.</p>.<p>ಕಾಂಗ್ರೆಸ್ನ ಗೋವಾ ಘಟಕದ ಅಧ್ಯಕ್ಷ ಗಿರೀಶ್ ಚೋಡಾನಕರ್, ಎಂಜಿಪಿಯ ಮುಖಂಡ ಸುದಿನ್ ಧವಳೀಕರ್ ಅವರು ಪ್ರತ್ಯೇಕ ಅರ್ಜಿ ಸಲ್ಲಿಸಿ, ತಮ್ಮ ಪಕ್ಷ ತೊರೆದು ಬಿಜೆಪಿ ಸೇರಿರುವ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದರು.</p>.<p>ಯಾವುದೇ ಕಾರಣಗಳನ್ನು ನೀಡದೆಯೇ ಈ ಎರಡೂ ಅರ್ಜಿಗಳನ್ನು ವಜಾಗೊಳಿಸಿ ಸ್ಪೀಕರ್ ಮೌಖಿಕ ಆದೇಶ ನೀಡಿದ್ದಾರೆ.</p>.<p>‘ಸ್ಪೀಕರ್ ಅವರ ಆದೇಶದ ಪ್ರತಿಗಾಗಿ ಕಾಯುತ್ತಿದ್ದೇವೆ. ಅದು ಕೈ ಸೇರಿದ ನಂತರ, ಕೋರ್ಟ್ ಮೊರೆ ಹೋಗುತ್ತೇವೆ’ ಎಂದು ಚೋಡಾನಕರ್ ಪರ ವಕೀಲ ಅಭಿಜಿತ್ ಗೋಸ್ವಾಮಿ ಪ್ರತಿಕ್ರಿಯಿಸಿದ್ದಾರೆ.</p>.<p>‘ಅರ್ಜಿ ವಜಾಗೊಳಿಸಲು ಸ್ಪೀಕರ್ ಅವರು ನೀಡಿರುವ ಕಾರಣಗಳನ್ನು ಪರಿಶೀಲಿಸಿದ ನಂತರ ನಮ್ಮ ಮುಂದಿನ ಕ್ರಮದ ಕುರಿತು ನಿರ್ಧರಿಸಲಾಗುವುದು’ ಎಂದು ಎಂಜಿಪಿ ಪರ ವಕೀಲ ಸಿ.ಎ.ಫೆರೀರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>