ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜ್‌ಪಾಲ್‌ ಅತ್ಯಾಚಾರ ಪ್ರಕರಣ: ಗೋವಾ ಸರ್ಕಾರದಿಂದ ಮೇಲ್ಮನವಿ

Last Updated 1 ಜೂನ್ 2021, 10:08 IST
ಅಕ್ಷರ ಗಾತ್ರ

ಮುಂಬೈ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ತರುಣ್ ತೇಜ್‌ಪಾಲ್ ಅವನ್ನು ಖುಲಾಸೆಗೊಳಿಸಿರುವುದರ ಬಗ್ಗೆ ಮರುತನಿಖೆ ನಡೆಸಬೇಕು ಎಂದು ಗೋವಾ ಸರ್ಕಾರ ಹೇಳಿದ್ದು, ಸೆಷನ್ಸ್‌ ನ್ಯಾಯಾಲಯದ ಗ್ರಹಿಕೆಯನ್ನೇ ತನ್ನ ಮೇಲ್ಮನವಿಯ ಪ್ರಮುಖ ವಿಷಯವನ್ನಾಗಿ ಮಾಡಿಕೊಂಡಿದೆ.

ಬಾಂಬೆ ಹೈಕೋರ್ಟ್‌ನ ಗೋವಾ ಪೀಠಕ್ಕೆ ಸಲ್ಲಿಸಲಾಗಿರುವ ಈ ಮೇಲ್ಮನವಿಗೆ ಕೆಲವು ತಿದ್ದುಪಡಿಗಳನ್ನು ಮಾಡಲಾಗಿದ್ದು, ಸೆಷನ್ಸ್‌ ನ್ಯಾಯಾಲಯವು ತಪ್ಪೊಪ್ಪಿಗೆಯ ಇಮೇಲ್ ಸಂದೇಶವನ್ನು ಸಂಪೂರ್ಣವಾಗಿ ಕಡೆಗಣಿಸಿದೆ, ಇದು ಯಾವುದೇ ಸಂಶಯ ಇಲ್ಲದ ರೀತಿಯಲ್ಲಿ ಆರೋಪಿಯ ತಪ್ಪನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದೆ.

‘ವಿಚಾರಣಾ ನ್ಯಾಯಾಲಯವು ಆರೋಪಿ ಪರ ನೀಡಲಾದ ಸಾಕ್ಷ್ಯಗಳನ್ನು ಸತ್ಯವೆಂದು ಪರಿಗಣಿಸಿದೆ. ಆದರೆ ಸಂತ್ರಸ್ತೆಯ ಪುರಾವೆಗಳನ್ನು ಪರಿಗಣಿಸಿಲ್ಲ‘ ಎಂದು ಸರ್ಕಾರ ಹೇಳಿದೆ. ಬುಧವಾರ ಈ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT