ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳಾರಂಭದಲ್ಲಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಅಭಿಯಾನ ನಡೆಸಿ ಎಂದು ಕರೆ ಕೊಟ್ಟಿದ್ದರು. ಅವರ ಕರೆಗೆ ಓಗೊಟ್ಟು ಕೋಟ್ಯಂತರ ಜನ ತಮ್ಮ ಮನೆಗಳ ಮುಂದೆ ಬಾವುಟವನ್ನು ಹಾರಿಸುತ್ತಿದ್ದಾರೆ. ಅಭಿಯಾನ ಮುಗಿದರೂ ಕೂಡ ಧ್ವಜ ಸಂಹಿತೆಗೆ ವಿರುದ್ಧವಾಗಿ ಜನ ಮನೆಗಳ ಮುಂದೆ ತಿರಂಗಾ ಹಾಕುತ್ತಿರುವುದು ಗಮನಕ್ಕೆ ಬಂದಿದೆ ಎಂದು ಸಾವಂತ್ ಹೇಳಿದ್ದಾರೆ.