ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್ ಅವರು, ‘ಗೋವಾ ಪೊಲೀಸರು ಪ್ರಕರಣದ ಕುರಿತು ಅತ್ಯುತ್ತಮವಾಗಿ ತನಿಖೆ ಮಾಡಿದ್ದಾರೆ. ಕೆಲವು ಸುಳಿವುಗಳನ್ನೂ ಪತ್ತೆ ಮಾಡಿದ್ದಾರೆ. ಆದರೆ, ಸೋನಾಲಿ ಅವರ ಮಗಳ ಬೇಡಿಕೆ ಹಾಗೂ ಹರಿಯಾಣದ ಜನತೆಯ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ನಾವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆಯುತ್ತೇವೆ’ ಎಂದು ತಿಳಿಸಿದ್ದಾರೆ.