<p class="title"><strong>ಪಣಜಿ, ಗೋವಾ (ಪಿಟಿಐ):</strong> ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದೊಡನೆ ಮೈತ್ರಿ ಮಾಡಿಕೊಂಡು ಮುಂಬರುವ ಗೋವಾ ವಿಧಾನಸಭೆ ಚುನಾವಣೆ ಎದುರಿಸುವುದಾಗಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ) ಸೋಮವಾರ ಪ್ರಕಟಿಸಿದೆ.</p>.<p class="title">ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಲು ತಮ್ಮ ಪಕ್ಷದ ಕೇಂದ್ರ ಸಮಿತಿ ನಿರ್ಧರಿಸಿದೆ ಎಂದು ಎಂಜಿಪಿ ಅಧ್ಯಕ್ಷ ದೀಪಕ್ ಧವಾಲಿಕರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p class="title">ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ನಂತರದಲ್ಲಿ ನಿರ್ಧರಿಸಲಾಗುವುದು ಎಂದೂ ಹೇಳಿದರು.</p>.<p class="bodytext">‘ಇಲ್ಲಿ ಬಿಜೆಪಿ ವಿರುದ್ಧ ಅಲೆಯಿದ್ದು ಜನರು ಬದಲಾವಣೆ ಬಯಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ನಾವು ಸರ್ಕಾರ ರಚಿಸಲಿದ್ದೇವೆ. ನಾವು ಯಾವಾಗಲೂ ಬಿಜೆಪಿ ವಿರುದ್ಧವಾಗಿದ್ದೇವೆ. ನಾವು ಕಾಂಗ್ರೆಸ್, ಟಿಎಂಸಿ ಮತ್ತು ಆಮ್ ಆದ್ಮಿ ಪಕ್ಷದ ಜೊತೆ ಮಾತುಕತೆ ನಡೆಸಿದ್ದೇವೆ’ ಎಂದು ದೀಪಕ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಣಜಿ, ಗೋವಾ (ಪಿಟಿಐ):</strong> ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದೊಡನೆ ಮೈತ್ರಿ ಮಾಡಿಕೊಂಡು ಮುಂಬರುವ ಗೋವಾ ವಿಧಾನಸಭೆ ಚುನಾವಣೆ ಎದುರಿಸುವುದಾಗಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ) ಸೋಮವಾರ ಪ್ರಕಟಿಸಿದೆ.</p>.<p class="title">ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಲು ತಮ್ಮ ಪಕ್ಷದ ಕೇಂದ್ರ ಸಮಿತಿ ನಿರ್ಧರಿಸಿದೆ ಎಂದು ಎಂಜಿಪಿ ಅಧ್ಯಕ್ಷ ದೀಪಕ್ ಧವಾಲಿಕರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.</p>.<p class="title">ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ನಂತರದಲ್ಲಿ ನಿರ್ಧರಿಸಲಾಗುವುದು ಎಂದೂ ಹೇಳಿದರು.</p>.<p class="bodytext">‘ಇಲ್ಲಿ ಬಿಜೆಪಿ ವಿರುದ್ಧ ಅಲೆಯಿದ್ದು ಜನರು ಬದಲಾವಣೆ ಬಯಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ನಾವು ಸರ್ಕಾರ ರಚಿಸಲಿದ್ದೇವೆ. ನಾವು ಯಾವಾಗಲೂ ಬಿಜೆಪಿ ವಿರುದ್ಧವಾಗಿದ್ದೇವೆ. ನಾವು ಕಾಂಗ್ರೆಸ್, ಟಿಎಂಸಿ ಮತ್ತು ಆಮ್ ಆದ್ಮಿ ಪಕ್ಷದ ಜೊತೆ ಮಾತುಕತೆ ನಡೆಸಿದ್ದೇವೆ’ ಎಂದು ದೀಪಕ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>