<p><strong>ಪಣಜಿ: </strong>ಎರಡು ತಿಂಗಳ ಹಿಂದೆಯಷ್ಟೇ ಆಮ್ಲಜನಕದ ಕೊರತೆಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ರೋಗಿಗಳು ಸಾವಿಗೀಡಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಈಗ ಉಲ್ಟಾ ಹೊಡೆದಿದ್ದಾರೆ. ‘ಅಂಥ ಯಾವುದೇ ಸೌಲಭ್ಯಗಳ ಕೊರತೆ ಎದುರಾಗಿಲ್ಲ, ಸಾವುಗಳೂ ಸಂಭವಿಸಿಲ್ಲ‘ ಎಂದು ಹೇಳಿದ್ದಾರೆ.</p>.<p>ಶುಕ್ರವಾರ ಸದನಕ್ಕೆ ಮಾಹಿತಿ ನೀಡಿದ ಸಚಿವ ವಿಶ್ವಜಿತ್, ‘ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಜಿಎಂಸಿಎಚ್)ಯಲ್ಲಿ ಆಮ್ಲಜನಕದ ಕೊರತೆಯಿಂದ ಒಬ್ಬ ಕೋವಿಡ್ ರೋಗಿಯೂ ಸಾವಿಗೀಡಾಗಿಲ್ಲ‘ ಎಂದು ತಿಳಿಸಿದ್ದಾರೆ.</p>.<p>ಸದನದಲ್ಲಿ ವಿಧಾನಸಭೆಯ ವಿರೋಧಪಕ್ಷದ ನಾಯಕ ದಿಗಂಬರ್ ಕಾಮತ್ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು, ‘ಜಿಎಂಸಿಎಚ್ನಲ್ಲಿ ಯಾವುದೇ ಸಮಯದಲ್ಲೂ ಆಮ್ಲಜನಕದ ಕೊರತೆ ಎದುರಾಗಿಲ್ಲ. ಆಮ್ಲಜನಕದ ಕೊರತೆಯಿಂದ ಕೋವಿಡ್ ರೋಗಿಗಳು ಸಾವಿಗೀಡಾಗಿರುವ ವರದಿಯಾಗಿಲ್ಲ‘ ಎಂದು ಹೇಳಿದರು.</p>.<p>ಆದರೆ, ಇದೇ ಆರೋಗ್ಯ ಸಚಿವರು ಮೇ 11 ರಂದು ‘ಜಿಎಂಸಿಎಚ್ನಲ್ಲಿ ಆಮ್ಲಜನಕದ ಕೊರತೆಯಿಂದಾಗಿ 24 ಗಂಟೆಗಳಲ್ಲಿ 26 ಮಂದಿ ಸಾವಿಗೀಡಾಗಿದ್ದಾರೆ‘ ಎಂದು ಹೇಳಿಕೆ ನೀಡಿದ್ದರು.</p>.<p><a href="https://www.prajavani.net/world-news/coronavirus-delta-variant-china-outbreak-spreads-as-who-sounds-alarm-on-delta-853339.html" itemprop="url">ಕೋವಿಡ್: ಚೀನಾದ ಹಲವೆಡೆ ಡೆಲ್ಟಾ ರೂಪಾಂತರ ಹರಡುವಿಕೆ ತೀವ್ರ, ಕಠಿಣ ನಿರ್ಬಂಧ ಜಾರಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ: </strong>ಎರಡು ತಿಂಗಳ ಹಿಂದೆಯಷ್ಟೇ ಆಮ್ಲಜನಕದ ಕೊರತೆಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ರೋಗಿಗಳು ಸಾವಿಗೀಡಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಈಗ ಉಲ್ಟಾ ಹೊಡೆದಿದ್ದಾರೆ. ‘ಅಂಥ ಯಾವುದೇ ಸೌಲಭ್ಯಗಳ ಕೊರತೆ ಎದುರಾಗಿಲ್ಲ, ಸಾವುಗಳೂ ಸಂಭವಿಸಿಲ್ಲ‘ ಎಂದು ಹೇಳಿದ್ದಾರೆ.</p>.<p>ಶುಕ್ರವಾರ ಸದನಕ್ಕೆ ಮಾಹಿತಿ ನೀಡಿದ ಸಚಿವ ವಿಶ್ವಜಿತ್, ‘ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಜಿಎಂಸಿಎಚ್)ಯಲ್ಲಿ ಆಮ್ಲಜನಕದ ಕೊರತೆಯಿಂದ ಒಬ್ಬ ಕೋವಿಡ್ ರೋಗಿಯೂ ಸಾವಿಗೀಡಾಗಿಲ್ಲ‘ ಎಂದು ತಿಳಿಸಿದ್ದಾರೆ.</p>.<p>ಸದನದಲ್ಲಿ ವಿಧಾನಸಭೆಯ ವಿರೋಧಪಕ್ಷದ ನಾಯಕ ದಿಗಂಬರ್ ಕಾಮತ್ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು, ‘ಜಿಎಂಸಿಎಚ್ನಲ್ಲಿ ಯಾವುದೇ ಸಮಯದಲ್ಲೂ ಆಮ್ಲಜನಕದ ಕೊರತೆ ಎದುರಾಗಿಲ್ಲ. ಆಮ್ಲಜನಕದ ಕೊರತೆಯಿಂದ ಕೋವಿಡ್ ರೋಗಿಗಳು ಸಾವಿಗೀಡಾಗಿರುವ ವರದಿಯಾಗಿಲ್ಲ‘ ಎಂದು ಹೇಳಿದರು.</p>.<p>ಆದರೆ, ಇದೇ ಆರೋಗ್ಯ ಸಚಿವರು ಮೇ 11 ರಂದು ‘ಜಿಎಂಸಿಎಚ್ನಲ್ಲಿ ಆಮ್ಲಜನಕದ ಕೊರತೆಯಿಂದಾಗಿ 24 ಗಂಟೆಗಳಲ್ಲಿ 26 ಮಂದಿ ಸಾವಿಗೀಡಾಗಿದ್ದಾರೆ‘ ಎಂದು ಹೇಳಿಕೆ ನೀಡಿದ್ದರು.</p>.<p><a href="https://www.prajavani.net/world-news/coronavirus-delta-variant-china-outbreak-spreads-as-who-sounds-alarm-on-delta-853339.html" itemprop="url">ಕೋವಿಡ್: ಚೀನಾದ ಹಲವೆಡೆ ಡೆಲ್ಟಾ ರೂಪಾಂತರ ಹರಡುವಿಕೆ ತೀವ್ರ, ಕಠಿಣ ನಿರ್ಬಂಧ ಜಾರಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>