ವಿಧಾನಸಭೆಗೆ 2017ರಲ್ಲಿ ಚುನಾವಣೆ ನಡೆದಾಗ ಕಾಂಗ್ರೆಸ್ 17 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಚುನಾವಣೆ ನಂತರ ವಿಶ್ವಜಿತ್ ರಾಣೆ ಸೇರಿದಂತೆ ಮೂವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. 2019ರ ಜುಲೈನಲ್ಲಿ ಕಾಂಗ್ರೆಸ್ಗೆ ಭಾರಿ ಹಿನ್ನಡೆಯಯಾಯಿತು. ಅಂದಿನ ವಿರೋಧ ಪಕ್ಷದ ನಾಯಕ ಚಂದ್ರಕಾಂತ್ ಕವಳೇಕರ್ ನೇತೃತ್ವದಲ್ಲಿ 10 ಮಂದಿ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕವಳೇಕರ್ ಅವರು ಸದ್ಯ ಗೋವಾದ ಉಪ ಮುಖ್ಯಮಂತ್ರಿಯಾಗಿದ್ದಾರೆ.