ಗೋವಾದಲ್ಲಿ ಅತಂತ್ರ ವಿಧಾನಸಭೆ ಏರ್ಪಡಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದ ಹಿನ್ನೆಲೆಯಲ್ಲಿ, ಮಂಗಳವಾರವೇ ಅಲ್ಲಿ ರಾಜಕೀಯ ಚುಟುವಟಿಕೆಗಳು ಬಿರುಸುಗೊಂಡಿದ್ದವು. ಅದೇ ದಿನ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೋವಾಕ್ಕೆ ತೆರಳಿದ್ದರು. ಫಲಿತಾಂಶ ಘೋಷಣೆಗೂ ಮುನ್ನ, ಅಭ್ಯರ್ಥಿಗಳನ್ನು ರೆಸಾರ್ಟ್ಗೆ ಸ್ಥಳಾಂತರಿಸಲು ಕಾಂಗ್ರೆಸ್ ಮುಂದಾಗಿತ್ತು.