<p class="title"><strong>ಪಣಜಿ, ಗೋವಾ:</strong> ಸರ್ದಾರ್ ವಲ್ಲಭಭಾಯಿ ಪಟೇಲರು ಇನ್ನೂ ಸ್ವಲ್ಪ ಕಾಲ ಬದುಕಿದ್ದರೆ ಗೋವಾ ಇನ್ನೂ ಬೇಗನೇ ಪೋರ್ಚುಗೀಸರ ಆಡಳಿತದಿಂದ ಮುಕ್ತಿ ಹೊಂದಿ ಸ್ವತಂತ್ರವಾಗುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.</p>.<p class="title">ಗೋವಾ ವಿಮೋಚನಾ ದಿನದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p class="title">‘ಭಾರತ ಸ್ವಾತಂತ್ರ್ಯ ಪಡೆದ ನಂತರವೂ ಗೋವಾ ಸ್ವತಂತ್ರವಾಗಿರಲಿಲ್ಲ. ಪಟೇಲರು ಅದಕ್ಕಾಗಿ ಹೋರಾಡುತ್ತಿದ್ದರು’ ಎಂದು ಮೋದಿ ಹೇಳಿದರು.</p>.<p class="bodytext">ಗೋವಾ ವಿಮೋಚನೆಗಾಗಿ ಹೋರಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಗೋವಾ ವಿಮೋಚನೆಗಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು.</p>.<p class="bodytext">ಉತ್ತಮ ಆಡಳಿತದ ಹಲವು ಮಾನದಂಡಗಳಲ್ಲಿ ರಾಜ್ಯವು ಉತ್ತಮ ಸಾಧನೆ ಮಾಡಿರುವುದಕ್ಕೆ ಪ್ರಧಾನಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.</p>.<p class="bodytext">ಭಾರತೀಯ ಸಶಸ್ತ್ರ ಪಡೆಯು 1961ರ ಡಿಸೆಂಬರ್ 19 ರಂದು ಗೋವಾವನ್ನು ಪೋರ್ಚುಗೀಸರ ದಾಸ್ಯದಿಂದ ವಿಮುಕ್ತಿಗೊಳಿಸಿತು. ಆದ್ದರಿಂದ ಈ ದಿನವನ್ನು ಗೋವಾ ವಿಮೋಚನಾ ದಿನವಾಗಿ ಆಚರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಣಜಿ, ಗೋವಾ:</strong> ಸರ್ದಾರ್ ವಲ್ಲಭಭಾಯಿ ಪಟೇಲರು ಇನ್ನೂ ಸ್ವಲ್ಪ ಕಾಲ ಬದುಕಿದ್ದರೆ ಗೋವಾ ಇನ್ನೂ ಬೇಗನೇ ಪೋರ್ಚುಗೀಸರ ಆಡಳಿತದಿಂದ ಮುಕ್ತಿ ಹೊಂದಿ ಸ್ವತಂತ್ರವಾಗುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.</p>.<p class="title">ಗೋವಾ ವಿಮೋಚನಾ ದಿನದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p class="title">‘ಭಾರತ ಸ್ವಾತಂತ್ರ್ಯ ಪಡೆದ ನಂತರವೂ ಗೋವಾ ಸ್ವತಂತ್ರವಾಗಿರಲಿಲ್ಲ. ಪಟೇಲರು ಅದಕ್ಕಾಗಿ ಹೋರಾಡುತ್ತಿದ್ದರು’ ಎಂದು ಮೋದಿ ಹೇಳಿದರು.</p>.<p class="bodytext">ಗೋವಾ ವಿಮೋಚನೆಗಾಗಿ ಹೋರಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಗೋವಾ ವಿಮೋಚನೆಗಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು.</p>.<p class="bodytext">ಉತ್ತಮ ಆಡಳಿತದ ಹಲವು ಮಾನದಂಡಗಳಲ್ಲಿ ರಾಜ್ಯವು ಉತ್ತಮ ಸಾಧನೆ ಮಾಡಿರುವುದಕ್ಕೆ ಪ್ರಧಾನಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.</p>.<p class="bodytext">ಭಾರತೀಯ ಸಶಸ್ತ್ರ ಪಡೆಯು 1961ರ ಡಿಸೆಂಬರ್ 19 ರಂದು ಗೋವಾವನ್ನು ಪೋರ್ಚುಗೀಸರ ದಾಸ್ಯದಿಂದ ವಿಮುಕ್ತಿಗೊಳಿಸಿತು. ಆದ್ದರಿಂದ ಈ ದಿನವನ್ನು ಗೋವಾ ವಿಮೋಚನಾ ದಿನವಾಗಿ ಆಚರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>