‘ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಮನವಿಯ ಮೇರೆಗೆ ಕೇರಳಕ್ಕೆ ಬಂದಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಈಗ ತನಿಖೆಯ ದಿಶೆ ತಮ್ಮತ್ತ ತಿರಗುತ್ತಿರುವುದರಿಂದ ಆತಂಕಕ್ಕೀಡಾಗಿದ್ದಾರೆ. ಮೊದಲು ತನಿಖೆಯನ್ನು ಸ್ವಾಗತಿಸಿದ್ದ ಅವರು ನಂತರ ಪ್ರಭಾವ ಬೀರಲು ಯತ್ನಿಸಿದ್ದಾರೆ. ನಂತರ ತನಿಖಾಧಿಕಾರಿಗಳಿಗೆ ಬೆದರಿಕೆಯೊಡ್ಡಿದ್ದಾರೆ’ ಎಂದು ಸುರೇಂದ್ರನ್ ಹೇಳಿದ್ದಾರೆ.