<p><strong>ಕೊಚ್ಚಿ: </strong>ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ಚಿನ್ನ ಕಳ್ಳ ಸಾಗಣೆ ಮಾಡಲು ನೆರವಾದ ಆರೋಪದಡಿ ಅಮಾನತುಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರು ಶುಕ್ರವಾರ ಕಸ್ಟಮ್ಸ್ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.</p>.<p>ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಈಗಾಗಲೇ ಎರಡು ಬಾರಿ ಶಿವಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.</p>.<p>ಜುಲೈ 5ರಂದು ಗಲ್ಫ್ನಿಂದ ಬಂದ ಏರ್ ಕಾರ್ಗೊ ಬ್ಯಾಗ್ವೊಂದರಲ್ಲಿ ₹15 ಕೋಟಿ ಮೌಲ್ಯದ 30 ಕೆ.ಜಿ.ಚಿನ್ನ ಪತ್ತೆಯಾಗಿತ್ತು. ಇದನ್ನುತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್, ಎನ್ಐಎ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಪ್ರತ್ಯೇಕ ತನಿಖೆ ನಡೆಸುತ್ತಿವೆ.</p>.<p>‘ರಾಷ್ಟ್ರೀಕೃತ ಬ್ಯಾಂಕ್ವೊಂದರಲ್ಲಿ ಲಾಕರ್ ತೆರೆಯಲು ಸ್ವಪ್ನಾಗೆ ಶಿವಶಂಕರ್ ಸಹಾಯ ಮಾಡಿರುವ ಅನುಮಾನವಿದೆ. ಚಿನ್ನ ಕಳ್ಳ ಸಾಗಣೆಯಿಂದ ಬಂದ ಹಣವನ್ನು ಸ್ನಪ್ನಾ ಇದೇ ಲಾಕರ್ನಲ್ಲಿ ಇಡುತ್ತಿದ್ದರು ಎಂಬುದು ಗೊತ್ತಾಗಿದೆ. ಈ ವಿಚಾರವಾಗಿ ಶಿವಶಂಕರ್ ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ಇ.ಡಿ. ಮಂಗಳವಾರ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮಧ್ಯಂತರ ಚಾರ್ಜ್ಶೀಟ್ನಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ: </strong>ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ಚಿನ್ನ ಕಳ್ಳ ಸಾಗಣೆ ಮಾಡಲು ನೆರವಾದ ಆರೋಪದಡಿ ಅಮಾನತುಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರು ಶುಕ್ರವಾರ ಕಸ್ಟಮ್ಸ್ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.</p>.<p>ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಈಗಾಗಲೇ ಎರಡು ಬಾರಿ ಶಿವಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.</p>.<p>ಜುಲೈ 5ರಂದು ಗಲ್ಫ್ನಿಂದ ಬಂದ ಏರ್ ಕಾರ್ಗೊ ಬ್ಯಾಗ್ವೊಂದರಲ್ಲಿ ₹15 ಕೋಟಿ ಮೌಲ್ಯದ 30 ಕೆ.ಜಿ.ಚಿನ್ನ ಪತ್ತೆಯಾಗಿತ್ತು. ಇದನ್ನುತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್, ಎನ್ಐಎ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಪ್ರತ್ಯೇಕ ತನಿಖೆ ನಡೆಸುತ್ತಿವೆ.</p>.<p>‘ರಾಷ್ಟ್ರೀಕೃತ ಬ್ಯಾಂಕ್ವೊಂದರಲ್ಲಿ ಲಾಕರ್ ತೆರೆಯಲು ಸ್ವಪ್ನಾಗೆ ಶಿವಶಂಕರ್ ಸಹಾಯ ಮಾಡಿರುವ ಅನುಮಾನವಿದೆ. ಚಿನ್ನ ಕಳ್ಳ ಸಾಗಣೆಯಿಂದ ಬಂದ ಹಣವನ್ನು ಸ್ನಪ್ನಾ ಇದೇ ಲಾಕರ್ನಲ್ಲಿ ಇಡುತ್ತಿದ್ದರು ಎಂಬುದು ಗೊತ್ತಾಗಿದೆ. ಈ ವಿಚಾರವಾಗಿ ಶಿವಶಂಕರ್ ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ಇ.ಡಿ. ಮಂಗಳವಾರ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮಧ್ಯಂತರ ಚಾರ್ಜ್ಶೀಟ್ನಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>