<div><strong>ಗುವಾಹಟಿ</strong>: ಅಸ್ಸಾಂ ಮತ್ತು ಮಿಜೋರಾಂ ಗಡಿಭಾಗದಲ್ಲಿನ ಹಿಂಸಾಚಾರದ ಕಾರಣಕ್ಕಾಗಿ ಇಲ್ಲಿನ ಎನ್ಎಚ್–306ನಲ್ಲಿ ಜುಲೈ 26ರಿಂದ ತಡೆಯಲಾಗಿದ್ದ ಸರಕು ಸಾಗಣೆ ಟ್ರಕ್ಗಳಿಗೆ ಮಿಜೋರಾಂಗೆ ತೆರಳಲು ಶನಿವಾರ ರಾತ್ರಿ ಅವಕಾಶ ಮಾಡಿಕೊಡಲಾಗಿದೆ.</div>.<div>ಹಿಂಸಾಚಾರದ ಕಾರಣಕ್ಕಾಗಿ ಗಡಿಭಾಗದ ದಕ್ಷಿಣ ಅಸ್ಸಾಂನ ಕಚಾರ್ ಜಿಲ್ಲೆಯ ಸ್ಥಳೀಯರು ಉದ್ರಿಕ್ತಗೊಂಡಿದ್ದರು. ಅಸ್ಸಾಂನ ಅರಣ್ಯ ಮತ್ತು ಪರಿಸರ ಸಚಿವ ಪರಿಮಳ್ ಸುಕ್ಲಬೈದ್ಯ ಹಾಗೂ ನಗರಭಿವೃದ್ಧಿ ಸಚಿವ ಅಶೋಕ್ ಸಿಂಘಾಲ್ ಅವರು ಸ್ಥಳೀಯರನ್ನು ಸಮಾಧಾನಪಡಿಸಿದ ನಂತರ ಟ್ರಕ್ಗಳ ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು.<div></div><div>ಶನಿವಾರ ರಾತ್ರಿ 9 ಟ್ರಕ್ಗಳು ಮಿಜೋರಾಂಗೆ ಪ್ರಯಾಣ ಬೆಳೆಸಿದವು. ಭಾನುವಾರ ಸಂಜೆಯ ವೇಳೆಗೆ ಸುಮಾರು 50 ಟ್ರಕ್ಗಳು ಮಿಜೋರಾಂಗೆ ತಲುಪಿದವು ಎಂದು ಮೂಲಗಳು ತಿಳಿಸಿವೆ.</div><div></div><div>ದಕ್ಷಿಣ ಅಸ್ಸಾಂನ ಕಚಾರ್ ಜಿಲ್ಲೆಯ ಲೈಲಾಪುರ ಮತ್ತು ಮಿಜೋರಾಂನ ಕೊಲಸಿಬ್ ಜಿಲ್ಲೆಯ ವೈರೆಂಗ್ಟೆ ನಡುವಿನ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಅಸ್ಸಾಂ ಪೊಲೀಸ್ ಅಧಿಕಾರಿಗಳ ತಂಡದ ಮೇಲೆ ಮಿಜೋರಾಂನ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಅಸ್ಸಾಂನ ಆರು ಪೊಲೀಸರು ಸೇರಿದಂತೆ ಒಬ್ಬ ನಾಗರಿಕ ಸಾವಿಗೀಡಾಗಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</div><div></div><div>ಗಡಿ ಪ್ರದೇಶದ ವಿಚಾರಕ್ಕೆ ಸಂಬಂಧಿಸಿದಂತೆ ಈ ಗುಂಡಿನ ದಾಳಿ ನಡೆದಿತ್ತು. ದಾಳಿಯನ್ನು ವಿರೋಧಿಸಿ ಕಚಾರ್ ಜಿಲ್ಲೆಯ ಲೈಲಾಪುರ ಗ್ರಾಮದ ಸ್ಥಳೀಯರು ಪ್ರತಿಭಟನೆ ನಡೆಸಿದ್ದರಿಂದ ಟ್ರಕ್ಗಳ ಪ್ರಯಾಣಕ್ಕೆ ತಡೆಯುಂಟಾಗಿತ್ತು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div><strong>ಗುವಾಹಟಿ</strong>: ಅಸ್ಸಾಂ ಮತ್ತು ಮಿಜೋರಾಂ ಗಡಿಭಾಗದಲ್ಲಿನ ಹಿಂಸಾಚಾರದ ಕಾರಣಕ್ಕಾಗಿ ಇಲ್ಲಿನ ಎನ್ಎಚ್–306ನಲ್ಲಿ ಜುಲೈ 26ರಿಂದ ತಡೆಯಲಾಗಿದ್ದ ಸರಕು ಸಾಗಣೆ ಟ್ರಕ್ಗಳಿಗೆ ಮಿಜೋರಾಂಗೆ ತೆರಳಲು ಶನಿವಾರ ರಾತ್ರಿ ಅವಕಾಶ ಮಾಡಿಕೊಡಲಾಗಿದೆ.</div>.<div>ಹಿಂಸಾಚಾರದ ಕಾರಣಕ್ಕಾಗಿ ಗಡಿಭಾಗದ ದಕ್ಷಿಣ ಅಸ್ಸಾಂನ ಕಚಾರ್ ಜಿಲ್ಲೆಯ ಸ್ಥಳೀಯರು ಉದ್ರಿಕ್ತಗೊಂಡಿದ್ದರು. ಅಸ್ಸಾಂನ ಅರಣ್ಯ ಮತ್ತು ಪರಿಸರ ಸಚಿವ ಪರಿಮಳ್ ಸುಕ್ಲಬೈದ್ಯ ಹಾಗೂ ನಗರಭಿವೃದ್ಧಿ ಸಚಿವ ಅಶೋಕ್ ಸಿಂಘಾಲ್ ಅವರು ಸ್ಥಳೀಯರನ್ನು ಸಮಾಧಾನಪಡಿಸಿದ ನಂತರ ಟ್ರಕ್ಗಳ ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು.<div></div><div>ಶನಿವಾರ ರಾತ್ರಿ 9 ಟ್ರಕ್ಗಳು ಮಿಜೋರಾಂಗೆ ಪ್ರಯಾಣ ಬೆಳೆಸಿದವು. ಭಾನುವಾರ ಸಂಜೆಯ ವೇಳೆಗೆ ಸುಮಾರು 50 ಟ್ರಕ್ಗಳು ಮಿಜೋರಾಂಗೆ ತಲುಪಿದವು ಎಂದು ಮೂಲಗಳು ತಿಳಿಸಿವೆ.</div><div></div><div>ದಕ್ಷಿಣ ಅಸ್ಸಾಂನ ಕಚಾರ್ ಜಿಲ್ಲೆಯ ಲೈಲಾಪುರ ಮತ್ತು ಮಿಜೋರಾಂನ ಕೊಲಸಿಬ್ ಜಿಲ್ಲೆಯ ವೈರೆಂಗ್ಟೆ ನಡುವಿನ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಅಸ್ಸಾಂ ಪೊಲೀಸ್ ಅಧಿಕಾರಿಗಳ ತಂಡದ ಮೇಲೆ ಮಿಜೋರಾಂನ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಅಸ್ಸಾಂನ ಆರು ಪೊಲೀಸರು ಸೇರಿದಂತೆ ಒಬ್ಬ ನಾಗರಿಕ ಸಾವಿಗೀಡಾಗಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</div><div></div><div>ಗಡಿ ಪ್ರದೇಶದ ವಿಚಾರಕ್ಕೆ ಸಂಬಂಧಿಸಿದಂತೆ ಈ ಗುಂಡಿನ ದಾಳಿ ನಡೆದಿತ್ತು. ದಾಳಿಯನ್ನು ವಿರೋಧಿಸಿ ಕಚಾರ್ ಜಿಲ್ಲೆಯ ಲೈಲಾಪುರ ಗ್ರಾಮದ ಸ್ಥಳೀಯರು ಪ್ರತಿಭಟನೆ ನಡೆಸಿದ್ದರಿಂದ ಟ್ರಕ್ಗಳ ಪ್ರಯಾಣಕ್ಕೆ ತಡೆಯುಂಟಾಗಿತ್ತು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>