ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್,‘ಪ್ರಜಾಪ್ರಭುತ್ವದ ಮೂಲಭೂತ ಅಂಶಗಳಿಗೆ ಕಡಿಮೆ ಅಥವಾ ಯಾವುದೇ ತೂಕವಿಲ್ಲ,ಪ್ರಶ್ನಾರ್ಹ ಮತ್ತು ಪಾರದರ್ಶಕವಲ್ಲದ ವಿಧಾನ ಅಳವಡಿಸಿಕೊಳ್ಳುವುದು’ ಸೇರಿದಂತೆ ವಿವಿಧ ಕಾರಣಗಳಿಗಾಗಿ ಸಂಸ್ಥೆ ರೂಪಿಸಿದ ತೀರ್ಮಾನಗಳನ್ನು ಸರ್ಕಾರ ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.