<p><strong>ಮುಂಬೈ</strong>: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಸೋಮವಾರ ವಿದ್ಯುತ್ ಪೂರೈಕೆ ಸ್ಥಗಿತಗೊಂಡ ಘಟನೆ ಕುರಿತಂತೆ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಮುಂದಾಗಿದೆ.</p>.<p>ಅದರಲ್ಲೂ, ವಿಧ್ವಂಸಕ ಕೃತ್ಯ ನಡೆಸುವ ಯತ್ನದ ಭಾಗವಾಗಿ ಈ ರೀತಿ ಮಾಡಲಾಗಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.</p>.<p>‘ವಿದ್ಯುತ್ ಪೂರೈಕೆ ವ್ಯವಸ್ಥೆಯ ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳುವ ಮುನ್ನ ಕೆಲವು ಶಿಷ್ಟಾಚಾರ ಪಾಲಿಸಬೇಕಾಗುತ್ತದೆ. ಅವುಗಳ ಪಾಲನೆ ಆಗಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಅಲ್ಲದೇ, ಈ ಘಟನೆ ಹಿಂದೆ ವಿಧ್ವಂಸಕ ಕೃತ್ಯ ನಡೆಸುವ ಯತ್ನ ಇತ್ತು ಎಂಬ ವಾದವನ್ನು ಸಹ ತಳ್ಳಿ ಹಾಕಲಾಗದು’ ಎಂದು ಇಂಧನ ಸಚಿವ ಡಾ.ನಿತಿನ್ ರಾವುತ್ ಹೇಳಿದರು.</p>.<p>‘ಘಟನೆ ಕುರಿತಂತೆ ತನಿಖೆ ಆರಂಭಿಸಿರುವ ಸಮಿತಿ ವಾರದೊಳಗೆ ತನ್ನ ಮಧ್ಯಂತರ ವರದಿ ಸಲ್ಲಿಸಲಿದೆ. ಸಮಿತಿ ಮಾಡುವ ಶಿಫಾರಸುಗಳನ್ನು ಜಾರಿಗೊಳಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದೂ ಹೇಳಿದರು.</p>.<p>ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ತನಿಖೆಗಾಗಿ ಸಮಿತಿಯೊಂದನ್ನು ರಚಿಸಿದ್ದಾರೆ. ತಪ್ಪಿತಸ್ಥರು ಯಾರೇ ಆಗಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದೂ ಸ್ಪಷ್ಟಪಡಿಸಿದ್ದಾರೆ.</p>.<p>ನವದೆಹಲಿ ಮೂಲದ ಕೇಂದ್ರೀಯ ವಿದ್ಯುತ್ ಪ್ರಾಧಿಕಾರವೂ ತನಿಖೆ ಆರಂಭಿಸಿದೆ.</p>.<p>ಮುಂಬೈನ ಕಳವಾದಲ್ಲಿರುವ 400 ಕೆ.ವಿ ಮಾರ್ಗ–1ರಲ್ಲಿ ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿತ್ತು. ಹೀಗಾಗಿ ವಿದ್ಯುತ್ ಪೂರೈಕೆಯ ಸಂಪೂರ್ಣ ಭಾರವನ್ನು ಮಾರ್ಗ–2ಕ್ಕೆ ವರ್ಗಾಯಿಸಲಾಯಿತು. ಈ ಕಾರಣದಿಂದ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡು, ಪೂರೈಕೆ ಸ್ಥಗಿತಗೊಂಡಿತು ಎಂದು ಪ್ರಾಥಮಿಕ ವರದಿಗಳು ಹೇಳಿವೆ.</p>.<p>ವಿದ್ಯುತ್ ಪೂರೈಕೆಯಲ್ಲಾದ ವ್ಯತ್ಯಯದಿಂದಾಗಿ ಮುಂಬೈ ನಗರ, ಉಪನಗರ, ಠಾಣೆ, ಪಾಲ್ಘರ್ ಹಾಗೂ ರಾಯಗಡದಲ್ಲಿ ಸಾಕಷ್ಟು ತೊಂದರೆಯಾಯಿತು.</p>.<p>ಅದಾನಿ, ಟಾಟಾ ಹಾಗೂ ಬೆಸ್ಟ್ ಮಾಲೀಕತ್ವದ ಕಂಪನಿಗಳು ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿ ಸೋಮವಾರವೇ ವಿದ್ಯುತ್ ಪೂರೈಕೆ ಮರುಸ್ಥಾಪನೆಯಾಗುವಂತೆ ಕ್ರಮ ಕೈಗೊಂಡವು. ಆದರೆ, ಹಲವು ಪ್ರದೇಶಗಳಿಗೆ ವಿದ್ಯುತ್ ಪೂರೈಸುವ ಜವಾಬ್ದಾರಿ ಹೊತ್ತಿರುವ, ರಾಜ್ಯ ಸರ್ಕಾರ ಒಡೆತನದ ಮಹಾವಿತರನ್ (ಎಂಎಸ್ಇಡಿಸಿಎಲ್) ಪೂರೈಕೆಯನ್ನು ಮಂಗಳವಾರ ಪುನರ್ಸ್ಥಾಪಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಸೋಮವಾರ ವಿದ್ಯುತ್ ಪೂರೈಕೆ ಸ್ಥಗಿತಗೊಂಡ ಘಟನೆ ಕುರಿತಂತೆ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಮುಂದಾಗಿದೆ.</p>.<p>ಅದರಲ್ಲೂ, ವಿಧ್ವಂಸಕ ಕೃತ್ಯ ನಡೆಸುವ ಯತ್ನದ ಭಾಗವಾಗಿ ಈ ರೀತಿ ಮಾಡಲಾಗಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.</p>.<p>‘ವಿದ್ಯುತ್ ಪೂರೈಕೆ ವ್ಯವಸ್ಥೆಯ ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳುವ ಮುನ್ನ ಕೆಲವು ಶಿಷ್ಟಾಚಾರ ಪಾಲಿಸಬೇಕಾಗುತ್ತದೆ. ಅವುಗಳ ಪಾಲನೆ ಆಗಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಅಲ್ಲದೇ, ಈ ಘಟನೆ ಹಿಂದೆ ವಿಧ್ವಂಸಕ ಕೃತ್ಯ ನಡೆಸುವ ಯತ್ನ ಇತ್ತು ಎಂಬ ವಾದವನ್ನು ಸಹ ತಳ್ಳಿ ಹಾಕಲಾಗದು’ ಎಂದು ಇಂಧನ ಸಚಿವ ಡಾ.ನಿತಿನ್ ರಾವುತ್ ಹೇಳಿದರು.</p>.<p>‘ಘಟನೆ ಕುರಿತಂತೆ ತನಿಖೆ ಆರಂಭಿಸಿರುವ ಸಮಿತಿ ವಾರದೊಳಗೆ ತನ್ನ ಮಧ್ಯಂತರ ವರದಿ ಸಲ್ಲಿಸಲಿದೆ. ಸಮಿತಿ ಮಾಡುವ ಶಿಫಾರಸುಗಳನ್ನು ಜಾರಿಗೊಳಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದೂ ಹೇಳಿದರು.</p>.<p>ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ತನಿಖೆಗಾಗಿ ಸಮಿತಿಯೊಂದನ್ನು ರಚಿಸಿದ್ದಾರೆ. ತಪ್ಪಿತಸ್ಥರು ಯಾರೇ ಆಗಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದೂ ಸ್ಪಷ್ಟಪಡಿಸಿದ್ದಾರೆ.</p>.<p>ನವದೆಹಲಿ ಮೂಲದ ಕೇಂದ್ರೀಯ ವಿದ್ಯುತ್ ಪ್ರಾಧಿಕಾರವೂ ತನಿಖೆ ಆರಂಭಿಸಿದೆ.</p>.<p>ಮುಂಬೈನ ಕಳವಾದಲ್ಲಿರುವ 400 ಕೆ.ವಿ ಮಾರ್ಗ–1ರಲ್ಲಿ ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿತ್ತು. ಹೀಗಾಗಿ ವಿದ್ಯುತ್ ಪೂರೈಕೆಯ ಸಂಪೂರ್ಣ ಭಾರವನ್ನು ಮಾರ್ಗ–2ಕ್ಕೆ ವರ್ಗಾಯಿಸಲಾಯಿತು. ಈ ಕಾರಣದಿಂದ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡು, ಪೂರೈಕೆ ಸ್ಥಗಿತಗೊಂಡಿತು ಎಂದು ಪ್ರಾಥಮಿಕ ವರದಿಗಳು ಹೇಳಿವೆ.</p>.<p>ವಿದ್ಯುತ್ ಪೂರೈಕೆಯಲ್ಲಾದ ವ್ಯತ್ಯಯದಿಂದಾಗಿ ಮುಂಬೈ ನಗರ, ಉಪನಗರ, ಠಾಣೆ, ಪಾಲ್ಘರ್ ಹಾಗೂ ರಾಯಗಡದಲ್ಲಿ ಸಾಕಷ್ಟು ತೊಂದರೆಯಾಯಿತು.</p>.<p>ಅದಾನಿ, ಟಾಟಾ ಹಾಗೂ ಬೆಸ್ಟ್ ಮಾಲೀಕತ್ವದ ಕಂಪನಿಗಳು ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿ ಸೋಮವಾರವೇ ವಿದ್ಯುತ್ ಪೂರೈಕೆ ಮರುಸ್ಥಾಪನೆಯಾಗುವಂತೆ ಕ್ರಮ ಕೈಗೊಂಡವು. ಆದರೆ, ಹಲವು ಪ್ರದೇಶಗಳಿಗೆ ವಿದ್ಯುತ್ ಪೂರೈಸುವ ಜವಾಬ್ದಾರಿ ಹೊತ್ತಿರುವ, ರಾಜ್ಯ ಸರ್ಕಾರ ಒಡೆತನದ ಮಹಾವಿತರನ್ (ಎಂಎಸ್ಇಡಿಸಿಎಲ್) ಪೂರೈಕೆಯನ್ನು ಮಂಗಳವಾರ ಪುನರ್ಸ್ಥಾಪಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>