ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್ನಿಂದ ವೇತನ ಸಿಗದೇ ದೈನಂದಿನ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ. ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರಕ್ಕೆ ಸಿಲುಕಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು ಎಂದಿದ್ದಾರೆ.