ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರದೃಷ್ಟಿಯ ಕೇಂದ್ರ ಸರ್ಕಾರದ ಅಗತ್ಯ ಇದೆ: ರಾಹುಲ್‌ ಚಾಟಿ

Last Updated 28 ಏಪ್ರಿಲ್ 2021, 10:57 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್‌ ಭವನದ ಆಧುನೀಕರಣ ಈಗ ಅವಶ್ಯಕತೆ ಇಲ್ಲ. ಆದರೆ, ದೂರದೃಷ್ಟಿವುಳ್ಳ ಕೇಂದ್ರ ಸರ್ಕಾರದ ಅಗತ್ಯ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬುಧವಾರ ಹೇಳಿದರು.

‘ಸೆಂಟ್ರಲ್‌ ವಿಸ್ತಾ ಅವಶ್ಯಕತೆ ಇಲ್ಲ. ದೂರದೃಷ್ಟಿ ಹೊಂದಿರುವ ಕೇಂದ್ರ ಸರ್ಕಾರದ ಅಗತ್ಯ ಇದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ಕೋವಿಡ್‌–19 ತೀವ್ರವಾಗಿ ಹರಡುತ್ತಿರುವುದಕ್ಕೆ ಸಂಬಂಧಿಸಿ ಮತ್ತೊಂದು ಟ್ವೀಟ್‌ ಮಾಡಿರುವ ಅವರು, ಸಾಮಾನ್ಯ ಜನರು ಪರಸ್ಪರರಿಗೆ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದಿದ್ದಾರೆ.

‘ಇದೇ ರೀತಿ ಒಬ್ಬರಿಗೊಬ್ಬರು ಸಹಾಯ ಮಾಡುವುದನ್ನು ಮುಂದುವರಿಸಬೇಕು. ಆ ಮೂಲಕ ಈ ‘ಕುರುಡು ವ್ಯವಸ್ಥೆ’ಯನ್ನು ಜನರಿಗೆ ತೋರಿಸಬೇಕು’ ಎಂದೂ ಅವರು ಹಿಂದಿಯಲ್ಲಿ ಮಾಡಿರುವ ಟ್ವೀಟ್‌ನಲ್ಲಿ ಹೇಳಿದ್ದಾರೆ.

ದೇಶದಲ್ಲಿ ಬುಧವಾರ 3.60 ಲಕ್ಷ ಹೊಸದಾಗಿ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 3,293 ಜನ ರೋಗಿಗಳು ಮೃತಪಟ್ಟಿದ್ದು, ಸತ್ತವರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT