<p><strong>ಮುಂಬೈ:</strong> ದೂರದ ಓಟಗಾರ್ತಿ, ಏಷ್ಯನ್ ಗೇಮ್ಸ್ ಪದಕ ಪುರಸ್ಕೃತೆ ಕವಿತಾ ರೌತ್ ಅವರಿಗೆ ಉದ್ಯೋಗ ನೀಡದಿರುವ ಮಹಾರಾಷ್ಟ್ರ ಸರ್ಕಾರದ ನಡೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಟೀಕಿಸಿದ್ದಾರೆ. ಈ ವಿಷಯದಲ್ಲಿ ಏನೋ ತಪ್ಪಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ನಾಸಿಕ್ನಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ ಕವಿತಾ ರೌತ್ಗೆ ಡೆಹ್ರಾಡೂನ್ನತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಉದ್ಯೋಗ ನೀಡಲಾಗಿದೆ. ಆದರೆ ಅವರು ತಮ್ಮ ಗ್ರಾಮದಲ್ಲಿ ಕೆಲಸ ಮಾಡಲು ಇಚ್ಛಿಸುತ್ತಿದ್ದಾರೆ. ನಾನು ಈ ಸಂಬಂಧ ರಾಜ್ಯದ ಕ್ರೀಡಾ ಸಚಿವರಿಗೆ ಪತ್ರ ಬರೆದಿದ್ದೆ. ಆಗ ಸಚಿವರು ಕವಿತಾ ಅವರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು’ ಎಂದು ಅವರು ತಿಳಿಸಿದರು.</p>.<p>‘ಕ್ರೀಡಾ ಸಚಿವರು ಮತ್ತು ನಾನು ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೂ ಮಹಾರಾಷ್ಟ್ರ ಸರ್ಕಾರ ಈವರೆಗೆ ಅವರಿಗೆ ಉದ್ಯೋಗ ನೀಡಿಲ್ಲ. ಇದರಲ್ಲಿ ಏನೋ ತಪ್ಪು ನಡೆದಿದೆ’ ಎಂದು ಅವರು ಹೇಳಿದರು.</p>.<p>‘ಸರ್ಕಾರ ನಿಮಗೆ ಉದ್ಯೋಗವನ್ನು ನೀಡುತ್ತದೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗಬಹುದು ಎಂದು ನಾನು ಕವಿತಾ ಅವರಿಗೆ ಭರವಸೆ ನೀಡಿದ್ದೇನೆ. ಸರ್ಕಾರ, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸದಿದ್ದರೆ, ಅವರು ಹೇಗೆ ಕೆಲಸ ಮಾಡಲು ಸಾಧ್ಯ’ ಎಂದು ಅವರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದೂರದ ಓಟಗಾರ್ತಿ, ಏಷ್ಯನ್ ಗೇಮ್ಸ್ ಪದಕ ಪುರಸ್ಕೃತೆ ಕವಿತಾ ರೌತ್ ಅವರಿಗೆ ಉದ್ಯೋಗ ನೀಡದಿರುವ ಮಹಾರಾಷ್ಟ್ರ ಸರ್ಕಾರದ ನಡೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಟೀಕಿಸಿದ್ದಾರೆ. ಈ ವಿಷಯದಲ್ಲಿ ಏನೋ ತಪ್ಪಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ನಾಸಿಕ್ನಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ ಕವಿತಾ ರೌತ್ಗೆ ಡೆಹ್ರಾಡೂನ್ನತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಉದ್ಯೋಗ ನೀಡಲಾಗಿದೆ. ಆದರೆ ಅವರು ತಮ್ಮ ಗ್ರಾಮದಲ್ಲಿ ಕೆಲಸ ಮಾಡಲು ಇಚ್ಛಿಸುತ್ತಿದ್ದಾರೆ. ನಾನು ಈ ಸಂಬಂಧ ರಾಜ್ಯದ ಕ್ರೀಡಾ ಸಚಿವರಿಗೆ ಪತ್ರ ಬರೆದಿದ್ದೆ. ಆಗ ಸಚಿವರು ಕವಿತಾ ಅವರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು’ ಎಂದು ಅವರು ತಿಳಿಸಿದರು.</p>.<p>‘ಕ್ರೀಡಾ ಸಚಿವರು ಮತ್ತು ನಾನು ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೂ ಮಹಾರಾಷ್ಟ್ರ ಸರ್ಕಾರ ಈವರೆಗೆ ಅವರಿಗೆ ಉದ್ಯೋಗ ನೀಡಿಲ್ಲ. ಇದರಲ್ಲಿ ಏನೋ ತಪ್ಪು ನಡೆದಿದೆ’ ಎಂದು ಅವರು ಹೇಳಿದರು.</p>.<p>‘ಸರ್ಕಾರ ನಿಮಗೆ ಉದ್ಯೋಗವನ್ನು ನೀಡುತ್ತದೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗಬಹುದು ಎಂದು ನಾನು ಕವಿತಾ ಅವರಿಗೆ ಭರವಸೆ ನೀಡಿದ್ದೇನೆ. ಸರ್ಕಾರ, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸದಿದ್ದರೆ, ಅವರು ಹೇಗೆ ಕೆಲಸ ಮಾಡಲು ಸಾಧ್ಯ’ ಎಂದು ಅವರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>