<p class="bodytext"><strong>ನವದೆಹಲಿ</strong>: ರಾಜ್ಯಪಾಲರು ಜನರು ಮತ್ತು ಸರ್ಕಾರಕ್ಕೆ ‘ಸ್ನೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕ’ರಿದ್ದಂತೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಪ್ರತಿಪಾದಿಸಿದರು.</p>.<p class="bodytext">ರಾಷ್ಟ್ರಪತಿ ಭವನದಲ್ಲಿ ನಡೆದ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳ 51ನೇ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ರಾಜ್ಯಪಾಲರು ತಮ್ಮ ರಾಜ್ಯಗಳಲ್ಲಿ ಸಾಧ್ಯವಾದಷ್ಟು ಸಮಯವನ್ನು ಜನತೆಗೆ ನೀಡಬೇಕು. ಜತೆಗೆ ಸಾರ್ವಜನಿಕರೊಂದಿಗೆ ಉತ್ಸಾಹಭರಿತ ಸಂಪರ್ಕಗಳನ್ನು ಹೊಂದಿರಬೇಕು. ರಾಜ್ಯದ ಜನರ ಕಲ್ಯಾಣ ಮತ್ತು ಸೇವೆ ಖಚಿತಪಡಿಸಿಕೊಳ್ಳಲು ಅವರು ಬದ್ಧರಾಗಿರುತ್ತಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.</p>.<p>‘ನೀವೆಲ್ಲರೂ ಕೆಲವು ಕಾರ್ಯಕ್ರಮಗಳ ಮೂಲಕ ಎಲ್ಲ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದ್ದೀರಿ ಎಂಬ ಖಾತ್ರಿ ನನಗಿದೆ. ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಸಾಮಾನ್ಯ ಜನರೊಂದಿಗೆ ನಿರಂತರ ಸಂಪರ್ಕ ಕಾಪಾಡಿಕೊಳ್ಳಬೇಕು’ ಎಂದು ಕೋವಿಂದ್ ಹೇಳಿದರು.</p>.<p>ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.</p>.<p>ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ದೇಶ ನಡೆಸುತ್ತಿರುವ ಹೋರಾಟವನ್ನು ಶ್ಲಾಘಿಸಿದ ರಾಷ್ಟ್ರಪತಿ, ಈ ಹೋರಾಟದಲ್ಲಿ ರಾಜ್ಯಪಾಲರ ಪಾತ್ರವೂ ಮಹತ್ವದ್ದಾಗಿದೆ. ರಾಜ್ಯಪಾಲರುಗಳು ಸಕ್ರಿಯ ಕೊಡುಗೆ ನೀಡಿದ್ದಾರೆ ಎಂದು ಪ್ರಶಂಸಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ</strong>: ರಾಜ್ಯಪಾಲರು ಜನರು ಮತ್ತು ಸರ್ಕಾರಕ್ಕೆ ‘ಸ್ನೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕ’ರಿದ್ದಂತೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಪ್ರತಿಪಾದಿಸಿದರು.</p>.<p class="bodytext">ರಾಷ್ಟ್ರಪತಿ ಭವನದಲ್ಲಿ ನಡೆದ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳ 51ನೇ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ರಾಜ್ಯಪಾಲರು ತಮ್ಮ ರಾಜ್ಯಗಳಲ್ಲಿ ಸಾಧ್ಯವಾದಷ್ಟು ಸಮಯವನ್ನು ಜನತೆಗೆ ನೀಡಬೇಕು. ಜತೆಗೆ ಸಾರ್ವಜನಿಕರೊಂದಿಗೆ ಉತ್ಸಾಹಭರಿತ ಸಂಪರ್ಕಗಳನ್ನು ಹೊಂದಿರಬೇಕು. ರಾಜ್ಯದ ಜನರ ಕಲ್ಯಾಣ ಮತ್ತು ಸೇವೆ ಖಚಿತಪಡಿಸಿಕೊಳ್ಳಲು ಅವರು ಬದ್ಧರಾಗಿರುತ್ತಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.</p>.<p>‘ನೀವೆಲ್ಲರೂ ಕೆಲವು ಕಾರ್ಯಕ್ರಮಗಳ ಮೂಲಕ ಎಲ್ಲ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದ್ದೀರಿ ಎಂಬ ಖಾತ್ರಿ ನನಗಿದೆ. ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಸಾಮಾನ್ಯ ಜನರೊಂದಿಗೆ ನಿರಂತರ ಸಂಪರ್ಕ ಕಾಪಾಡಿಕೊಳ್ಳಬೇಕು’ ಎಂದು ಕೋವಿಂದ್ ಹೇಳಿದರು.</p>.<p>ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.</p>.<p>ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ದೇಶ ನಡೆಸುತ್ತಿರುವ ಹೋರಾಟವನ್ನು ಶ್ಲಾಘಿಸಿದ ರಾಷ್ಟ್ರಪತಿ, ಈ ಹೋರಾಟದಲ್ಲಿ ರಾಜ್ಯಪಾಲರ ಪಾತ್ರವೂ ಮಹತ್ವದ್ದಾಗಿದೆ. ರಾಜ್ಯಪಾಲರುಗಳು ಸಕ್ರಿಯ ಕೊಡುಗೆ ನೀಡಿದ್ದಾರೆ ಎಂದು ಪ್ರಶಂಸಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>