<p><strong>ನವದೆಹಲಿ</strong>: ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳು ₹ 2 ಲಕ್ಷಕ್ಕಿಂತ ಹೆಚ್ಚು ಹಣವನ್ನು ನಗದು ರೂಪದಲ್ಲಿ ಸ್ವೀಕರಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.</p>.<p>ಆದಾಯ ತೆರಿಗೆ ಇಲಾಖೆಗಾಗಿ ನೀತಿ ರೂಪಿಸುವ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಶುಕ್ರವಾರ ಈ ಅಧಿಸೂಚನೆ ಹೊರಡಿಸಿದೆ.</p>.<p>ಕೋವಿಡ್–19 ರೋಗಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269ST ಅನ್ವಯ ಒಂದು ದಿನದಲ್ಲಿ ಒಬ್ಬ ವ್ಯಕ್ತಿಯು ₹ 2 ಲಕ್ಷಕ್ಕಿಂತ ಹೆಚ್ಚು ನಗದು ಪಡೆಯುವುದನ್ನು ನಿರ್ಬಂಧಿಸುತ್ತದೆ. ಕಪ್ಪು ಹಣ ತಡೆಯುವ ಸಂಬಂಧ 2017ರಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ರೂಪಿಸಿತ್ತು.</p>.<p>‘ಈ ಕಾಯ್ದೆಯಲ್ಲಿ ಹೊಸದಾಗಿ ನೀಡಲಾಗಿರುವ ಈ ಸೌಲಭ್ಯವು ಏಪ್ರಿಲ್ 1 ರಿಂದ ಮೇ 31ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರೋಗಿಯ ಪಾನ್ ಅಥವಾ ಆಧರ್ ಸಂಖ್ಯೆ, ಹಣ ಪಾವತಿಸುವವರು ಮತ್ತು ರೋಗಿಯ ನಡುವಿನ ಸಂಬಂಧನ್ನು ಪಡೆದುಕೊಳ್ಳಬೇಕು ಎಂಬ ನಿಬಂಧನೆಗಳನ್ನು ಸೇರಿಸಲಾಗುತ್ತಿದೆ‘ ಎಂದು ಹೊಸ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳು ₹ 2 ಲಕ್ಷಕ್ಕಿಂತ ಹೆಚ್ಚು ಹಣವನ್ನು ನಗದು ರೂಪದಲ್ಲಿ ಸ್ವೀಕರಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.</p>.<p>ಆದಾಯ ತೆರಿಗೆ ಇಲಾಖೆಗಾಗಿ ನೀತಿ ರೂಪಿಸುವ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಶುಕ್ರವಾರ ಈ ಅಧಿಸೂಚನೆ ಹೊರಡಿಸಿದೆ.</p>.<p>ಕೋವಿಡ್–19 ರೋಗಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269ST ಅನ್ವಯ ಒಂದು ದಿನದಲ್ಲಿ ಒಬ್ಬ ವ್ಯಕ್ತಿಯು ₹ 2 ಲಕ್ಷಕ್ಕಿಂತ ಹೆಚ್ಚು ನಗದು ಪಡೆಯುವುದನ್ನು ನಿರ್ಬಂಧಿಸುತ್ತದೆ. ಕಪ್ಪು ಹಣ ತಡೆಯುವ ಸಂಬಂಧ 2017ರಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ರೂಪಿಸಿತ್ತು.</p>.<p>‘ಈ ಕಾಯ್ದೆಯಲ್ಲಿ ಹೊಸದಾಗಿ ನೀಡಲಾಗಿರುವ ಈ ಸೌಲಭ್ಯವು ಏಪ್ರಿಲ್ 1 ರಿಂದ ಮೇ 31ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರೋಗಿಯ ಪಾನ್ ಅಥವಾ ಆಧರ್ ಸಂಖ್ಯೆ, ಹಣ ಪಾವತಿಸುವವರು ಮತ್ತು ರೋಗಿಯ ನಡುವಿನ ಸಂಬಂಧನ್ನು ಪಡೆದುಕೊಳ್ಳಬೇಕು ಎಂಬ ನಿಬಂಧನೆಗಳನ್ನು ಸೇರಿಸಲಾಗುತ್ತಿದೆ‘ ಎಂದು ಹೊಸ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>