<p class="title"><strong>ನವದೆಹಲಿ</strong>: ಎಂಟು ಮಂದಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಬಾಕಿ ಇರುವ ಶಿಫಾರಸುಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಇತ್ಯರ್ಥಗೊಳಿಸುವುದಾಗಿ ಕಾನೂನು ಸಚಿವ ಕಿರಣ್ ರಿಜಿಜು ಭರವಸೆ ನೀಡಿರುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಶನಿವಾರ ಹೇಳಿದ್ದಾರೆ.</p>.<p class="title">ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್ಎಎಲ್ಎಸ್ಎ) ಹಮ್ಮಿಕೊಂಡಿರುವ ಆರು ವಾರಗಳ ‘ಪ್ಯಾನ್ ಇಂಡಿಯಾ ಕಾನೂನು ಅರಿವು ಮತ್ತು ಔಟ್ರೀಚ್ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮೇ ತಿಂಗಳಿನಿಂದ ನಾವು 106ಕ್ಕೂ ಹೆಚ್ಚು ನ್ಯಾಯಾಧೀಶರನ್ನು ವಿವಿಧ ಹೈಕೋರ್ಟ್ಗಳಿಗೆ ಮತ್ತು ಒಂಬತ್ತು ಮುಖ್ಯ ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ಗಳಿಗೆ ನೇಮಕ ಮಾಡಲು ಶಿಫಾರಸು ಮಾಡಿದ್ದೇವೆ. ಸರ್ಕಾರವು ಈವರೆಗೆ 106 ನ್ಯಾಯಾಧೀಶರ ಪೈಕಿ ಏಳು ಮತ್ತು 9 ಮುಖ್ಯ ನ್ಯಾಯಮೂರ್ತಿಗಳ ಪೈಕಿ ಒಬ್ಬರ ಶಿಫಾರಸು ಇತ್ಯರ್ಥಗೊಳಿಸಿದೆ’ ಎಂದು ಅವರು ಹೇಳಿದರು.</p>.<p>‘ಉಳಿದ ಹೆಸರುಗಳನ್ನು ಸರ್ಕಾರವು ಶೀಘ್ರದಲ್ಲೇ ಇತ್ಯರ್ಥಗೊಳಿಸಲಿದೆಂದು ನಾನು ನಿರೀಕ್ಷಿಸಿರುವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಎಂಟು ಮಂದಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಬಾಕಿ ಇರುವ ಶಿಫಾರಸುಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಇತ್ಯರ್ಥಗೊಳಿಸುವುದಾಗಿ ಕಾನೂನು ಸಚಿವ ಕಿರಣ್ ರಿಜಿಜು ಭರವಸೆ ನೀಡಿರುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಶನಿವಾರ ಹೇಳಿದ್ದಾರೆ.</p>.<p class="title">ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್ಎಎಲ್ಎಸ್ಎ) ಹಮ್ಮಿಕೊಂಡಿರುವ ಆರು ವಾರಗಳ ‘ಪ್ಯಾನ್ ಇಂಡಿಯಾ ಕಾನೂನು ಅರಿವು ಮತ್ತು ಔಟ್ರೀಚ್ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮೇ ತಿಂಗಳಿನಿಂದ ನಾವು 106ಕ್ಕೂ ಹೆಚ್ಚು ನ್ಯಾಯಾಧೀಶರನ್ನು ವಿವಿಧ ಹೈಕೋರ್ಟ್ಗಳಿಗೆ ಮತ್ತು ಒಂಬತ್ತು ಮುಖ್ಯ ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ಗಳಿಗೆ ನೇಮಕ ಮಾಡಲು ಶಿಫಾರಸು ಮಾಡಿದ್ದೇವೆ. ಸರ್ಕಾರವು ಈವರೆಗೆ 106 ನ್ಯಾಯಾಧೀಶರ ಪೈಕಿ ಏಳು ಮತ್ತು 9 ಮುಖ್ಯ ನ್ಯಾಯಮೂರ್ತಿಗಳ ಪೈಕಿ ಒಬ್ಬರ ಶಿಫಾರಸು ಇತ್ಯರ್ಥಗೊಳಿಸಿದೆ’ ಎಂದು ಅವರು ಹೇಳಿದರು.</p>.<p>‘ಉಳಿದ ಹೆಸರುಗಳನ್ನು ಸರ್ಕಾರವು ಶೀಘ್ರದಲ್ಲೇ ಇತ್ಯರ್ಥಗೊಳಿಸಲಿದೆಂದು ನಾನು ನಿರೀಕ್ಷಿಸಿರುವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>