ಇದೇ ತಿಂಗಳ 18ರಂದು ಸಭೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಸಂಜಯ್ ಕಿಶನ್ ಕೌಲ್ ಮತ್ತು ಕೆ.ಎಂ. ಜೋಸೆಫ್ ಅವರನ್ನು ಒಳಗೊಂಡ ಕೊಲಿಜಿಯಂ, ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಅಮಿತೇಶ್ ಬ್ಯಾನರ್ಜಿ ಮತ್ತು ಸಾಕ್ಯಾ ಸೆನ್ ಅವರನ್ನೇ ನೇಮಿಸುವಂತೆ ಮೇಲಿನ ಕಾರಣಕ್ಕೆ ಮತ್ತೊಮ್ಮೆ ಶಿಫಾರಸು ಮಾಡಲು ನಿರ್ಧರಿಸಿದೆ.