ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತು ಆರಂಭಿಸಿದ ಮೋದಿ, ರೈತರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಈ ಕಾಯ್ದೆಗಳನ್ನು ತರಲಾಗಿತ್ತು. ಅವಿರತ ಪ್ರಯತ್ನದ ಹೊರತಾಗಿಯೂ ಕೃಷಿ ಕಾಯ್ದೆಗಳ ಬಗ್ಗೆ ಒಂದು ವರ್ಗದ ರೈತರ ಮನವೊಲಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ಕಾಯ್ದೆಗಳನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ರೈತ ಮಿತ್ರರು ಪ್ರತಿಭಟನೆ ಕೈಬಿಟ್ಟು ತಮ್ಮ ಊರುಗಳಿಗೆ ತೆರಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ ಎಂದು ಮನವಿ ಮಾಡಿದರು.