<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ಕೇಂದ್ರ ವಿಚಕ್ಷಣಾ ಆಯೋಗದ (ಸಿವಿಸಿ) ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಅದನ್ನು ಕುಂಠಿತಗೊಳಿಸಿದೆ ಎಂದು ವಿಶ್ರಾಂತ ನ್ಯಾಯಮೂರ್ತಿಗಳು, ಸಾಮಾಜಿಕ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಸಿವಿಸಿ ಅಧ್ಯಕ್ಷರ ಸ್ಥಾನ ಈ ವರ್ಷದ ಜೂನ್ನಿಂದ ತೆರವಾಗಿದೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ತೆರವಾಗಿದ್ದ ಇಬ್ಬರು ಆಯುಕ್ತರ ಸ್ಥಾನವನ್ನೂ ಭರ್ತಿ ಮಾಡಿಲ್ಲ. ಸದ್ಯ, ಆಯೋಗ ಒಬ್ಬ ಆಯುಕ್ತರ ನೇತೃತ್ವದಲ್ಲಿ ಕೆಲಸ ಮಾಡುತ್ತಿದೆ. ಕಾಯ್ದೆಯಲ್ಲಿ ಅವಕಾಶ ಇಲ್ಲದಿದ್ದರೂ ಅವರನ್ನೇ ಪ್ರಭಾರ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದಿದ್ದಾರೆ.</p>.<p>ದೆಹಲಿ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎ.ಪಿ.ಶಾ, ಪಟ್ನಾ ಹೈಕೋರ್ಟ್ನನಿವೃತ್ತ ನ್ಯಾಯಮೂರ್ತಿ ಅಂಜನಾ ಪ್ರಕಾಶ್, ಮಾಜಿ ಐಎಎಸ್ ಅಧಿಕಾರಿ ಸುಂದರ್ ಬುರ್ರಾ, ಮಾಜಿ ಐಪಿಎಸ್ ಅಧಿಕಾರಿ ಮೀರನ್ ಬೋರವಾಂಕರ್ ಇತರರು ಈ ಪತ್ರ ಸಹಿ ಹಾಕಿದ್ದಾರೆ.</p>.<p>ಪತ್ರಕ್ಕೆ ಸಹಿ ಹಾಕಿರುವ ಇತರರಲ್ಲಿ ಮಾಜಿ ಮಾಹಿತಿ ಆಯುಕ್ತ ಶೈಲೇಶ್ ಗಾಂಧಿ, ವಕೀಲ ಪ್ರಶಾಂತ್ ಭೂಷಣ್ ಮತ್ತು ಸಾಮಾಜಿಕ ಕಾರ್ಯಕರ್ತರಾದ ಅಂಜಲಿ ಭಾರಧ್ವಾಜ್ ಅವರೂ ಸೇರಿದ್ದಾರೆ.</p>.<p>ಸಿವಿಸಿ ಅಂತಹ ಸ್ವಾಯತ್ತ ಸಂಸ್ಥೆ ಸ್ಥಾಪನೆಯ ಉದ್ದೇಶವೇ ವಿಫಲವಾಗಿದೆ. ಆಯುಕ್ತರ ಹುದ್ದೆಯನ್ನೇ ಖಾಲಿ ಉಳಿಸಿ ಅದರ ಅಧಿಕಾರವನ್ನು ಪರಿಣಾಮಕಾರಿಯಾಗಿ ಕುಂಠಿತಗೊಳಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ಕೇಂದ್ರ ವಿಚಕ್ಷಣಾ ಆಯೋಗದ (ಸಿವಿಸಿ) ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಅದನ್ನು ಕುಂಠಿತಗೊಳಿಸಿದೆ ಎಂದು ವಿಶ್ರಾಂತ ನ್ಯಾಯಮೂರ್ತಿಗಳು, ಸಾಮಾಜಿಕ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಸಿವಿಸಿ ಅಧ್ಯಕ್ಷರ ಸ್ಥಾನ ಈ ವರ್ಷದ ಜೂನ್ನಿಂದ ತೆರವಾಗಿದೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ತೆರವಾಗಿದ್ದ ಇಬ್ಬರು ಆಯುಕ್ತರ ಸ್ಥಾನವನ್ನೂ ಭರ್ತಿ ಮಾಡಿಲ್ಲ. ಸದ್ಯ, ಆಯೋಗ ಒಬ್ಬ ಆಯುಕ್ತರ ನೇತೃತ್ವದಲ್ಲಿ ಕೆಲಸ ಮಾಡುತ್ತಿದೆ. ಕಾಯ್ದೆಯಲ್ಲಿ ಅವಕಾಶ ಇಲ್ಲದಿದ್ದರೂ ಅವರನ್ನೇ ಪ್ರಭಾರ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದಿದ್ದಾರೆ.</p>.<p>ದೆಹಲಿ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎ.ಪಿ.ಶಾ, ಪಟ್ನಾ ಹೈಕೋರ್ಟ್ನನಿವೃತ್ತ ನ್ಯಾಯಮೂರ್ತಿ ಅಂಜನಾ ಪ್ರಕಾಶ್, ಮಾಜಿ ಐಎಎಸ್ ಅಧಿಕಾರಿ ಸುಂದರ್ ಬುರ್ರಾ, ಮಾಜಿ ಐಪಿಎಸ್ ಅಧಿಕಾರಿ ಮೀರನ್ ಬೋರವಾಂಕರ್ ಇತರರು ಈ ಪತ್ರ ಸಹಿ ಹಾಕಿದ್ದಾರೆ.</p>.<p>ಪತ್ರಕ್ಕೆ ಸಹಿ ಹಾಕಿರುವ ಇತರರಲ್ಲಿ ಮಾಜಿ ಮಾಹಿತಿ ಆಯುಕ್ತ ಶೈಲೇಶ್ ಗಾಂಧಿ, ವಕೀಲ ಪ್ರಶಾಂತ್ ಭೂಷಣ್ ಮತ್ತು ಸಾಮಾಜಿಕ ಕಾರ್ಯಕರ್ತರಾದ ಅಂಜಲಿ ಭಾರಧ್ವಾಜ್ ಅವರೂ ಸೇರಿದ್ದಾರೆ.</p>.<p>ಸಿವಿಸಿ ಅಂತಹ ಸ್ವಾಯತ್ತ ಸಂಸ್ಥೆ ಸ್ಥಾಪನೆಯ ಉದ್ದೇಶವೇ ವಿಫಲವಾಗಿದೆ. ಆಯುಕ್ತರ ಹುದ್ದೆಯನ್ನೇ ಖಾಲಿ ಉಳಿಸಿ ಅದರ ಅಧಿಕಾರವನ್ನು ಪರಿಣಾಮಕಾರಿಯಾಗಿ ಕುಂಠಿತಗೊಳಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>