‘ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ರೈತ ನಾಯಕರು ಒತ್ತಾಯಿಸುತ್ತಲೇ ಇದ್ದರು. ಆದರೆ, ಸರ್ಕಾರದ ಕಡೆಯಿಂದ ಕಾಯ್ದೆಗಳ ಪ್ರಯೋಜನಗಳನ್ನು ವಿವರಿಸಲು ಪ್ರಯತ್ನಿಸಲಾಯಿತು. ರೈತರು ಎದುರಿಸುತ್ತಿರುವ ನಿರ್ದಿಷ್ಟ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸಭೆಯಲ್ಲಿ ಪ್ರಯತ್ನಿಸಲಾಯಿತು’ ಎಂದು ತೋಮರ್ ಹೇಳಿದ್ದಾರೆ. ವಯಸ್ಸಾದವರು, ಮಕ್ಕಳು ಹಾಗೂ ಮಹಿಳೆಯರು ತಮ್ಮ ಊರುಗಳಿಗೆ ವಾಪಸಾಗಬೇಕು ಎಂದು ಮನವಿ ಮಾಡಿದರು.