<p><strong>ನವದೆಹಲಿ: </strong>ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಕೆಲ ವ್ಯಕ್ತಿಗಳು ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದನೆ ಸಂಘಟನೆ ಸೇರಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p>ರಾಜ್ಯಸಭೆಯಲ್ಲಿ ಬುಧವಾರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಷಣ್ ರೆಡ್ಡಿ ಈ ವಿಷಯ ತಿಳಿಸಿದ್ದಾರೆ.</p>.<p>ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳು ಈ ಸಂಘಟನೆಯ ಚಟುವಟಿಕೆಗಳ ಮೇಲೆ ನಿಗಾವಹಿಸಿವೆ ಎಂದು ತಿಳಿಸಿದ್ದಾರೆ.</p>.<p>ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಐಎಸ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 17 ಪ್ರಕರಣಗಳನ್ನು ದಾಖಲಿಸಿದ್ದು, 122 ಮಂದಿಯನ್ನು ಬಂಧಿಸಿದೆ ಎಂದು ತಿಳಿಸಿದ್ದಾರೆ.</p>.<p>ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಐಎಸ್ ಸಂಘಟನೆ ಅತಿ ಹೆಚ್ಚು ಕ್ರಿಯಾಶೀಲವಾಗಿದೆ ಎನ್ನುವುದು ಎನ್ಐಎ ತನಿಖೆಯಿಂದ ತಿಳಿದು ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ತನ್ನ ಸಿದ್ಧಾಂತಗಳ ಪ್ರಚಾರಕ್ಕೆ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮಗಳನ್ನು ಐಎಸ್ ಸಂಘಟನೆ ಬಳಸಿಕೊಳ್ಳುತ್ತಿದೆ. ಹೀಗಾಗಿ, ಸೈಬರ್ ಜಾಲದ ಮೇಲೆ ಹೆಚ್ಚು ನಿಗಾವಹಿಸಲಾಗಿದ್ದು, ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<p>ಈ ಸಂಘಟನೆಗೆ ಯಾವ ರೀತಿ ಹಣ ನೀಡಲಾಗುತ್ತಿದೆ ಮತ್ತು ಭಯೋತ್ಪಾದನೆ ಚಟುವಟಿಕೆಗಳನ್ನು ಕೈಗೊಳ್ಳಲು ವಿದೇಶದಿಂದ ಹಣ ಒದಗಿಸಲಾಗುತ್ತಿದೆಯೇ ಎನ್ನುವ ಬಗ್ಗೆ ಸರ್ಕಾರದ ಬಳಿ ಮಾಹಿತಿ ಇದ್ದು, ತನಿಖಾ ಸಂಸ್ಥೆಗಳು ನಿರಂತರವಾಗಿ ಕ್ರಮಕೈಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಕೆಲ ವ್ಯಕ್ತಿಗಳು ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದನೆ ಸಂಘಟನೆ ಸೇರಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p>ರಾಜ್ಯಸಭೆಯಲ್ಲಿ ಬುಧವಾರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಷಣ್ ರೆಡ್ಡಿ ಈ ವಿಷಯ ತಿಳಿಸಿದ್ದಾರೆ.</p>.<p>ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳು ಈ ಸಂಘಟನೆಯ ಚಟುವಟಿಕೆಗಳ ಮೇಲೆ ನಿಗಾವಹಿಸಿವೆ ಎಂದು ತಿಳಿಸಿದ್ದಾರೆ.</p>.<p>ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಐಎಸ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 17 ಪ್ರಕರಣಗಳನ್ನು ದಾಖಲಿಸಿದ್ದು, 122 ಮಂದಿಯನ್ನು ಬಂಧಿಸಿದೆ ಎಂದು ತಿಳಿಸಿದ್ದಾರೆ.</p>.<p>ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಐಎಸ್ ಸಂಘಟನೆ ಅತಿ ಹೆಚ್ಚು ಕ್ರಿಯಾಶೀಲವಾಗಿದೆ ಎನ್ನುವುದು ಎನ್ಐಎ ತನಿಖೆಯಿಂದ ತಿಳಿದು ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ತನ್ನ ಸಿದ್ಧಾಂತಗಳ ಪ್ರಚಾರಕ್ಕೆ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮಗಳನ್ನು ಐಎಸ್ ಸಂಘಟನೆ ಬಳಸಿಕೊಳ್ಳುತ್ತಿದೆ. ಹೀಗಾಗಿ, ಸೈಬರ್ ಜಾಲದ ಮೇಲೆ ಹೆಚ್ಚು ನಿಗಾವಹಿಸಲಾಗಿದ್ದು, ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<p>ಈ ಸಂಘಟನೆಗೆ ಯಾವ ರೀತಿ ಹಣ ನೀಡಲಾಗುತ್ತಿದೆ ಮತ್ತು ಭಯೋತ್ಪಾದನೆ ಚಟುವಟಿಕೆಗಳನ್ನು ಕೈಗೊಳ್ಳಲು ವಿದೇಶದಿಂದ ಹಣ ಒದಗಿಸಲಾಗುತ್ತಿದೆಯೇ ಎನ್ನುವ ಬಗ್ಗೆ ಸರ್ಕಾರದ ಬಳಿ ಮಾಹಿತಿ ಇದ್ದು, ತನಿಖಾ ಸಂಸ್ಥೆಗಳು ನಿರಂತರವಾಗಿ ಕ್ರಮಕೈಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>