<p><strong>ನವದೆಹಲಿ</strong>: ‘ಮುಂಗಾರು ಅಧಿವೇಶನವು ಜುಲೈ ತಿಂಗಳಲ್ಲಿ ಸುಗಮವಾಗಿ ನಡೆಯುವ ವಿಶ್ವಾಸವಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಂಗಳವಾರ ತಿಳಿಸಿದ್ದಾರೆ.</p>.<p>ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ಆರಂಭವಾದ ಬಳಿಕ ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿತ್ತು. ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಪಡಿಸಲಾಗಿತ್ತು.</p>.<p>ಕಳೆದ ವರ್ಷ ಮುಂಗಾರು ಅಧಿವೇಶನವನ್ನು ಜುಲೈ ಬದಲು ಸೆಪ್ಟೆಂಬರ್ನಲ್ಲಿ ನಡೆಸಲಾಗಿತ್ತು. ಈ ಬಾರಿ ಮುಂಗಾರು ಅಧಿವೇಶನವನ್ನು ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.</p>.<p>ಲೋಕಸಭೆ ಮತ್ತು ರಾಜ್ಯಸಭೆಯ ಬಹುತೇಕ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ, ಕೋವಿಡ್–19 ವಿರುದ್ಧದ ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ಪಡೆದಿದ್ದಾರೆ. ಹೀಗಾಗಿ, ಜುಲೈನಲ್ಲಿ ಅಧಿವೇಶನ ನಡೆಯುವ ಸಾಧ್ಯತೆಗಳು ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/india-news/bombay-hc-cancels-caste-certificate-of-amravati-mp-navneet-rana-837081.html" itemprop="url">ಅಮರಾವತಿ ಸಂಸದೆಯ ಜಾತಿ ಪ್ರಮಾಣಪತ್ರ ರದ್ದುಪಡಿಸಿದ ಬಾಂಬೆ ಹೈಕೋರ್ಟ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಮುಂಗಾರು ಅಧಿವೇಶನವು ಜುಲೈ ತಿಂಗಳಲ್ಲಿ ಸುಗಮವಾಗಿ ನಡೆಯುವ ವಿಶ್ವಾಸವಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಂಗಳವಾರ ತಿಳಿಸಿದ್ದಾರೆ.</p>.<p>ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ಆರಂಭವಾದ ಬಳಿಕ ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿತ್ತು. ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಪಡಿಸಲಾಗಿತ್ತು.</p>.<p>ಕಳೆದ ವರ್ಷ ಮುಂಗಾರು ಅಧಿವೇಶನವನ್ನು ಜುಲೈ ಬದಲು ಸೆಪ್ಟೆಂಬರ್ನಲ್ಲಿ ನಡೆಸಲಾಗಿತ್ತು. ಈ ಬಾರಿ ಮುಂಗಾರು ಅಧಿವೇಶನವನ್ನು ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.</p>.<p>ಲೋಕಸಭೆ ಮತ್ತು ರಾಜ್ಯಸಭೆಯ ಬಹುತೇಕ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ, ಕೋವಿಡ್–19 ವಿರುದ್ಧದ ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ಪಡೆದಿದ್ದಾರೆ. ಹೀಗಾಗಿ, ಜುಲೈನಲ್ಲಿ ಅಧಿವೇಶನ ನಡೆಯುವ ಸಾಧ್ಯತೆಗಳು ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/india-news/bombay-hc-cancels-caste-certificate-of-amravati-mp-navneet-rana-837081.html" itemprop="url">ಅಮರಾವತಿ ಸಂಸದೆಯ ಜಾತಿ ಪ್ರಮಾಣಪತ್ರ ರದ್ದುಪಡಿಸಿದ ಬಾಂಬೆ ಹೈಕೋರ್ಟ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>