ವಿದ್ಯಾರ್ಥಿಗಳ ಒತ್ತಾಯವನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ರಾಹುಲ್ಗಾಂಧಿ, ’ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆರೋಗ್ಯದ ಜತೆಗೆ ಭವಿಷ್ಯದ ಬಗ್ಗೆಯೂ ಕಾಳಜಿ ಇದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪ್ರಯಾಣ ಮಾಡುವುದು, ಹೋಟೆಲ್ಗಳಲ್ಲಿ ಆಹಾರ ಸೇವನೆ, ವಸತಿ ಗೃಹಗಳಲ್ಲಿ ವಾಸ್ತವ್ಯ ಹೂಡುವುದರ ಬಗ್ಗೆ ಭಯಭೀತರಾಗಿದ್ದಾರೆ. ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ’ ಎಂದ ಟ್ವೀಟ್ನಲ್ಲಿ ವಿವರಿಸಿದ್ದಾರೆ.