<p><strong>ನವದೆಹಲಿ:</strong> ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕಾರ್ಯತಂತ್ರ ಕುರಿತು ವಿವರಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.<br /><br />ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಉಕ್ರೇನ್ನಿಂದಈವರೆಗೆ ಎಷ್ಟು ಜನರನ್ನು ಭಾರತಕ್ಕೆ ಕರೆತರಲಾಗಿದೆ. ಇನ್ನು ಎಷ್ಟು ಜನರನ್ನು ಸ್ಥಳಾಂತರ ಮಾಡಬೇಕಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು. ಜತೆಗೆ, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಭಾರತೀಯರ ಸ್ಥಳಾಂತರ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ.</p>.<p>ಉಕ್ರೇನ್ನಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗುವ ಉದ್ದೇಶದಿಂದ ಕೇಂದ್ರದ ನಾಲ್ವರು ಸಚಿವರು ಈಗಾಗಲೇ ಉಕ್ರೇನ್ ನೆರೆ ರಾಷ್ಟ್ರಗಳಿಗೆ ತೆರಳಿದ್ದಾರೆ.</p>.<p>ಕೇಂದ್ರ ಸಚಿವರಾದ ಹರದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು, ವಿ.ಕೆ. ಸಿಂಗ್ ಅವರು ವಿದ್ಯಾರ್ಥಿಗಳಿಗೆ ನೆರವಾಗಲು ಉಕ್ರೇನ್ ನೆರೆ ದೇಶಗಳಾದ ಪೋಲೆಂಡ್, ರೊಮೇನಿಯಾ, ಹಂಗೇರಿ, ಸ್ಲೊವಾಕಿಯಾಗಳಿಗೆ ತೆರಳಿದ್ದಾರೆ.</p>.<p>ಮಂಗಳವಾರ ಒಂದೇ ದಿನ ಸುಮಾರು 2 ಸಾವಿರ ಭಾರತೀಯರನ್ನು ಸ್ಥಳಾಂತರ ಮಾಡಲಾಗಿದೆ. ಮುಂದಿನ 2 ದಿನಗಳಲ್ಲಿ 4ರಿಂದ 5 ಸಾವಿರ ಜನರನ್ನು ಸ್ಥಳಾಂತರ ಮಾಡಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ತಿಳಿಸಿದ್ದಾರೆ.</p>.<p><strong>ಓದಿ... <a href="https://www.prajavani.net/world-news/russia-ukraine-news-live-updates-military-operation-in-ukraine-vladimir-putin-un-meet-volodymyr-913837.html" target="_blank">Live Updates, ರಷ್ಯಾ–ಉಕ್ರೇನ್ ಸಂಘರ್ಷ | ನಮ್ಮ ಇತಿಹಾಸವನ್ನು ಅಳಿಸಲು ಮುಂದಾಗಿದೆ ರಷ್ಯಾ: ವೊಲೊಡಿಮಿರ್ ಝೆಲೆನ್ಸ್ಕಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕಾರ್ಯತಂತ್ರ ಕುರಿತು ವಿವರಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.<br /><br />ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಉಕ್ರೇನ್ನಿಂದಈವರೆಗೆ ಎಷ್ಟು ಜನರನ್ನು ಭಾರತಕ್ಕೆ ಕರೆತರಲಾಗಿದೆ. ಇನ್ನು ಎಷ್ಟು ಜನರನ್ನು ಸ್ಥಳಾಂತರ ಮಾಡಬೇಕಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು. ಜತೆಗೆ, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಭಾರತೀಯರ ಸ್ಥಳಾಂತರ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ.</p>.<p>ಉಕ್ರೇನ್ನಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗುವ ಉದ್ದೇಶದಿಂದ ಕೇಂದ್ರದ ನಾಲ್ವರು ಸಚಿವರು ಈಗಾಗಲೇ ಉಕ್ರೇನ್ ನೆರೆ ರಾಷ್ಟ್ರಗಳಿಗೆ ತೆರಳಿದ್ದಾರೆ.</p>.<p>ಕೇಂದ್ರ ಸಚಿವರಾದ ಹರದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು, ವಿ.ಕೆ. ಸಿಂಗ್ ಅವರು ವಿದ್ಯಾರ್ಥಿಗಳಿಗೆ ನೆರವಾಗಲು ಉಕ್ರೇನ್ ನೆರೆ ದೇಶಗಳಾದ ಪೋಲೆಂಡ್, ರೊಮೇನಿಯಾ, ಹಂಗೇರಿ, ಸ್ಲೊವಾಕಿಯಾಗಳಿಗೆ ತೆರಳಿದ್ದಾರೆ.</p>.<p>ಮಂಗಳವಾರ ಒಂದೇ ದಿನ ಸುಮಾರು 2 ಸಾವಿರ ಭಾರತೀಯರನ್ನು ಸ್ಥಳಾಂತರ ಮಾಡಲಾಗಿದೆ. ಮುಂದಿನ 2 ದಿನಗಳಲ್ಲಿ 4ರಿಂದ 5 ಸಾವಿರ ಜನರನ್ನು ಸ್ಥಳಾಂತರ ಮಾಡಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ತಿಳಿಸಿದ್ದಾರೆ.</p>.<p><strong>ಓದಿ... <a href="https://www.prajavani.net/world-news/russia-ukraine-news-live-updates-military-operation-in-ukraine-vladimir-putin-un-meet-volodymyr-913837.html" target="_blank">Live Updates, ರಷ್ಯಾ–ಉಕ್ರೇನ್ ಸಂಘರ್ಷ | ನಮ್ಮ ಇತಿಹಾಸವನ್ನು ಅಳಿಸಲು ಮುಂದಾಗಿದೆ ರಷ್ಯಾ: ವೊಲೊಡಿಮಿರ್ ಝೆಲೆನ್ಸ್ಕಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>