ದೇಶದ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ರಾಜ್ಯದ ಜನತೆ ಉದ್ದೇಶಿಸಿ ಮಾತನಾಡಿದ ಅವರು, ‘ನನ್ನ ಪ್ರೀತಿಯ ನಾಗಾ ಸಹೋದರ ಮತ್ತು ಸಹೋದರಿಯರೇ, ನಾಗಾಲ್ಯಾಂಡ್ ದೇಶದ ಅವಿಭಾಜ್ಯ ಅಂಗ. ನಮ್ಮ ಅನನ್ಯ ಸಾಂಸ್ಕೃತಿಕ ಹೆಗ್ಗುರುತನ್ನು ಕಾಪಾಡಿಕೊಳ್ಳಬೇಕು. ವಸಾಹತುಶಾಹಿ ಮನಸ್ಥಿತಿ ತೊರೆದು, ದೇಶದ ಹಿತಕ್ಕಾಗಿ ದೇಶವಾಸಿಗಳೊಂದಿಗೆ ಹೆಜ್ಜೆ ಹಾಕಿ. ಇದು ಭವಿಷ್ಯದಲ್ಲೂ ನಾಡಿನಲ್ಲಿ ಶಾಂತಿ, ಸಹಬಾಳ್ವೆ ನೆಲೆಸುವಂತೆ ಮಾಡುತ್ತದೆ’ ಎಂದು ಹೇಳಿದರು.