<p><strong>ಮುಂಬೈ:</strong> ಮಲಾಡ್ನಲ್ಲಿನ ಉದ್ಯಾನವೊಂದಕ್ಕೆ ಇಡಲಾಗಿರುವ ‘ಟಿಪ್ಪು ಸುಲ್ತಾನ್’ ಹೆಸರನ್ನು ತೆಗೆದು ಹಾಕುವಂತೆ ಸ್ಥಳೀಯ ಆಡಳಿತಕ್ಕೆ ಮಹಾರಾಷ್ಟ್ರ ರಾಜ್ಯ ಸರ್ಕಾರ ಆದೇಶಿಸಿದೆ.</p>.<p>ಈ ಹಿಂದೆ ಅಧಿಕಾರದಲ್ಲಿದ್ದ ಉದ್ಧವ್ ಠಾಕ್ರೆ ನೇತೃತ್ವದ ಮಹಾವಿಕಾಸ್ ಆಘಾಡಿ (ಎಂವಿಎ) ಸರ್ಕಾರವು ಈ ಉದ್ಯಾನಕ್ಕೆ ಟಿಪ್ಪು ಸುಲ್ತಾನ್ ಎಂಬುದಾಗಿ ನಾಮಕರಣ ಮಾಡಿತ್ತು. ಆದರೆ, ಈ ಹೆಸರನ್ನು ತೆಗೆದು ಹಾಕುವಂತೆ ಪ್ರಸಕ್ತ ಸರ್ಕಾರ ಆದೇಶಿಸಿರುವುದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ.</p>.<p>ಮುಂಬೈ ಉಪನಗರ ಜಿಲ್ಲೆಯ ಉಸ್ತುವಾರಿ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. </p>.<p>‘ಇದು ಬಲಪಂಥಕ್ಕೆ ಸಂದ ಜಯ. ಉದ್ಯಾನಕ್ಕೆ ಇಟ್ಟಿರುವ ಹೆಸರನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಸಕಲ ಹಿಂದೂ ಸಮಾಜ ಪ್ರತಿಭಟನೆಗಳನ್ನು ನಡೆಸಿತ್ತು. ಇದೇ ಬೇಡಿಕೆಯನ್ನು ಮುಂಬೈ ಉತ್ತರ ಲೋಕಸಭಾ ಸಂಸದ ಗೋಪಾಲ್ ಶೆಟ್ಟಿ ಅವರು ಡಿಪಿಡಿಸಿ ಸಭೆಯಲ್ಲಿ ಮಂಡಿಸಿದ್ದರು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಟಿಪ್ಪು ಸುಲ್ತಾನ್ ಹೆಸರನ್ನು ತೆಗೆದು ಹಾಕುವಂತೆ ಆದೇಶಿಸಲಾಗಿದೆ’ ಎಂದು ಲೋಧಾ ಹೇಳಿದ್ದಾರೆ.</p>.<p>‘ಈ ವಿಷಯದಲ್ಲಿ ಯಾವುದೇ ರಾಜಕೀಯ ಇಲ್ಲ. ಉದ್ಯಾನದ ಮರುನಾಮಕರಣ ವಿರೋಧಿಸಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದರು. ಜನರ ಭಾವನೆಗಳಿಗೆ ಗೌರವ ಕೊಟ್ಟು, ಈ ಆದೇಶ ಹೊರಡಿಸಲಾಗಿದೆ ಅಷ್ಟೆ’ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>‘ಸದ್ಯ ಉದ್ಯಾನಕ್ಕೆ ಯಾವ ಹೆಸರನ್ನು ಇಡಬೇಕು ಎಂಬ ಬಗ್ಗೆ ಯಾವುದೇ ಪ್ರಸ್ತಾವಗಳಿಲ್ಲ. ಮುಂಬರುವ ಸಭೆಗಳಲ್ಲಿ ಪ್ರಸ್ತಾವಗಳು ಸಲ್ಲಿಕೆಯಾಗಲಿದ್ದು, ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ಕಳೆದ ವರ್ಷ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಎಂವಿಎ ಸರ್ಕಾರದಲ್ಲಿ ಜವಳಿ ಸಚಿವರಾಗಿದ್ದ ಅಸ್ಲಾಂ ಶೇಖ್ ಅವರು ಈ ಉದ್ಯಾನ ಉದ್ಘಾಟಿಸಿದ್ದರು. ಉದ್ಯಾನಕ್ಕೆ ಟಿಪ್ಪು ಸುಲ್ತಾನ್ ಎಂದು ಹೆಸರಿಟ್ಟಿದ್ದರು.</p>.<p>ಉದ್ಯಾನದ ಹೆಸರನ್ನು ಬದಲಾಯಿಸುವಂತೆ ಆಗ್ರಹಿಸಿ, ಕಳೆದ ವರ್ಷ ಜನವರಿ 26ರಂದು ಬಲಪಂಥೀಯ ಸಂಘಟನೆಗಳು, ಬಿಜೆಪಿ ಮುಖಂಡರಾದ ಶೆಟ್ಟಿ ಹಾಗೂ ಲೋಧಾ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಲಾಡ್ನಲ್ಲಿನ ಉದ್ಯಾನವೊಂದಕ್ಕೆ ಇಡಲಾಗಿರುವ ‘ಟಿಪ್ಪು ಸುಲ್ತಾನ್’ ಹೆಸರನ್ನು ತೆಗೆದು ಹಾಕುವಂತೆ ಸ್ಥಳೀಯ ಆಡಳಿತಕ್ಕೆ ಮಹಾರಾಷ್ಟ್ರ ರಾಜ್ಯ ಸರ್ಕಾರ ಆದೇಶಿಸಿದೆ.</p>.<p>ಈ ಹಿಂದೆ ಅಧಿಕಾರದಲ್ಲಿದ್ದ ಉದ್ಧವ್ ಠಾಕ್ರೆ ನೇತೃತ್ವದ ಮಹಾವಿಕಾಸ್ ಆಘಾಡಿ (ಎಂವಿಎ) ಸರ್ಕಾರವು ಈ ಉದ್ಯಾನಕ್ಕೆ ಟಿಪ್ಪು ಸುಲ್ತಾನ್ ಎಂಬುದಾಗಿ ನಾಮಕರಣ ಮಾಡಿತ್ತು. ಆದರೆ, ಈ ಹೆಸರನ್ನು ತೆಗೆದು ಹಾಕುವಂತೆ ಪ್ರಸಕ್ತ ಸರ್ಕಾರ ಆದೇಶಿಸಿರುವುದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ.</p>.<p>ಮುಂಬೈ ಉಪನಗರ ಜಿಲ್ಲೆಯ ಉಸ್ತುವಾರಿ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. </p>.<p>‘ಇದು ಬಲಪಂಥಕ್ಕೆ ಸಂದ ಜಯ. ಉದ್ಯಾನಕ್ಕೆ ಇಟ್ಟಿರುವ ಹೆಸರನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಸಕಲ ಹಿಂದೂ ಸಮಾಜ ಪ್ರತಿಭಟನೆಗಳನ್ನು ನಡೆಸಿತ್ತು. ಇದೇ ಬೇಡಿಕೆಯನ್ನು ಮುಂಬೈ ಉತ್ತರ ಲೋಕಸಭಾ ಸಂಸದ ಗೋಪಾಲ್ ಶೆಟ್ಟಿ ಅವರು ಡಿಪಿಡಿಸಿ ಸಭೆಯಲ್ಲಿ ಮಂಡಿಸಿದ್ದರು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಟಿಪ್ಪು ಸುಲ್ತಾನ್ ಹೆಸರನ್ನು ತೆಗೆದು ಹಾಕುವಂತೆ ಆದೇಶಿಸಲಾಗಿದೆ’ ಎಂದು ಲೋಧಾ ಹೇಳಿದ್ದಾರೆ.</p>.<p>‘ಈ ವಿಷಯದಲ್ಲಿ ಯಾವುದೇ ರಾಜಕೀಯ ಇಲ್ಲ. ಉದ್ಯಾನದ ಮರುನಾಮಕರಣ ವಿರೋಧಿಸಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದರು. ಜನರ ಭಾವನೆಗಳಿಗೆ ಗೌರವ ಕೊಟ್ಟು, ಈ ಆದೇಶ ಹೊರಡಿಸಲಾಗಿದೆ ಅಷ್ಟೆ’ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>‘ಸದ್ಯ ಉದ್ಯಾನಕ್ಕೆ ಯಾವ ಹೆಸರನ್ನು ಇಡಬೇಕು ಎಂಬ ಬಗ್ಗೆ ಯಾವುದೇ ಪ್ರಸ್ತಾವಗಳಿಲ್ಲ. ಮುಂಬರುವ ಸಭೆಗಳಲ್ಲಿ ಪ್ರಸ್ತಾವಗಳು ಸಲ್ಲಿಕೆಯಾಗಲಿದ್ದು, ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ಕಳೆದ ವರ್ಷ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಎಂವಿಎ ಸರ್ಕಾರದಲ್ಲಿ ಜವಳಿ ಸಚಿವರಾಗಿದ್ದ ಅಸ್ಲಾಂ ಶೇಖ್ ಅವರು ಈ ಉದ್ಯಾನ ಉದ್ಘಾಟಿಸಿದ್ದರು. ಉದ್ಯಾನಕ್ಕೆ ಟಿಪ್ಪು ಸುಲ್ತಾನ್ ಎಂದು ಹೆಸರಿಟ್ಟಿದ್ದರು.</p>.<p>ಉದ್ಯಾನದ ಹೆಸರನ್ನು ಬದಲಾಯಿಸುವಂತೆ ಆಗ್ರಹಿಸಿ, ಕಳೆದ ವರ್ಷ ಜನವರಿ 26ರಂದು ಬಲಪಂಥೀಯ ಸಂಘಟನೆಗಳು, ಬಿಜೆಪಿ ಮುಖಂಡರಾದ ಶೆಟ್ಟಿ ಹಾಗೂ ಲೋಧಾ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>