ನವದೆಹಲಿ: ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ವರ್ಗದ ಹುದ್ದೆಗಳು ಖಾಲಿ ಇದ್ದರೂ, ಡಿಗ್ರಿ ಪಡೆದು ನಿರುದ್ಯೋಗ ಎದುರಿಸುತ್ತಿರುವ ವಿದ್ಯಾವಂತ ಯುವ ಸಮೂಹಕ್ಕೆ ಕೇಂದ್ರ ಸರ್ಕಾರ ಉದ್ಯೋಗ ನೀಡದೇ ಶಿಕ್ಷಿಸುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
‘ವಿದ್ಯಾವಂತ ಯುವಕರು ತೀವ್ರ ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ನೈಜ ಪದವಿಗಳನ್ನುಪಡೆದಿರುವ ಒಬಿಸಿ, ಎಸ್ಸಿ ಮತ್ತು ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಉದ್ಯೋಗ ನೀಡದೇ ಶಿಕ್ಷಿಸುತ್ತಿದೆ ‘ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.